ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂ ಕುಸಿತ: ಕೇದಾರನಾಥ ಯಾತ್ರೆಗೆ ತಡೆ

Last Updated 24 ಮೇ 2014, 13:06 IST
ಅಕ್ಷರ ಗಾತ್ರ

ಡೆಹ್ರಾಡೂನ್ (ಐಎಎನ್ಎಸ್): ಉತ್ತರಾಖಂಡದ ಕೇದಾರನಾಥ ಯಾತ್ರೆಗೆ ತೆರಳುವ ಮಾರ್ಗದಲ್ಲಿ ರುದ್ರಪ್ರಯಾಗದ ಬಳಿ ಶನಿವಾರ ಭೂ ಕುಸಿತ ಉಂಟಾಗಿ ರಸ್ತೆ ಸಂಪರ್ಕ ಕಡಿತಗೊಂಡ ಪರಿಣಾಮ ಯಾತ್ರೆಯನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿದೆ.

ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಭೂ ಕುಸಿತ ಉಂಟಾಗಿದ್ದು, ತಿಲವಾಡ-ಗುಪ್ತಕಾಶಿ ಮಾರ್ಗ ಬಂದ್ ಆಗಿದೆ. ಈ ಪ್ರದೇಶದಲ್ಲಿ ಪ್ರತಿಕೂಲ ವಾತಾವರಣ ಇರುವ ಹಿನ್ನೆಲೆಯಲ್ಲಿ ಯಾತ್ರೆಯನ್ನು ತಡೆಯಲಾಗಿದೆ ಎಂದು ಸ್ಥಳೀಯ ಆಡಳಿತ ತಿಳಿಸಿದೆ.

ಕಳೆದ ವರ್ಷ ಉತ್ತರಾಖಾಂಡದಲ್ಲಿ ಸಂಭವಿಸಿದ ಜಲ ಪ್ರಳಯದಲ್ಲಿ ಸಾವಿರಾರು ಜನ ಜಲಸಮಾಧಿಯಾಗಿದ ಘಟನೆ ಇಲ್ಲಿ ಸ್ಮರಣೀಯ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT