ಡೆಹ್ರಾಡೂನ್ (ಐಎಎನ್ಎಸ್): ಉತ್ತರಾಖಂಡದ ಕೇದಾರನಾಥ ಯಾತ್ರೆಗೆ ತೆರಳುವ ಮಾರ್ಗದಲ್ಲಿ ರುದ್ರಪ್ರಯಾಗದ ಬಳಿ ಶನಿವಾರ ಭೂ ಕುಸಿತ ಉಂಟಾಗಿ ರಸ್ತೆ ಸಂಪರ್ಕ ಕಡಿತಗೊಂಡ ಪರಿಣಾಮ ಯಾತ್ರೆಯನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿದೆ.
ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಭೂ ಕುಸಿತ ಉಂಟಾಗಿದ್ದು, ತಿಲವಾಡ-ಗುಪ್ತಕಾಶಿ ಮಾರ್ಗ ಬಂದ್ ಆಗಿದೆ. ಈ ಪ್ರದೇಶದಲ್ಲಿ ಪ್ರತಿಕೂಲ ವಾತಾವರಣ ಇರುವ ಹಿನ್ನೆಲೆಯಲ್ಲಿ ಯಾತ್ರೆಯನ್ನು ತಡೆಯಲಾಗಿದೆ ಎಂದು ಸ್ಥಳೀಯ ಆಡಳಿತ ತಿಳಿಸಿದೆ.
ಕಳೆದ ವರ್ಷ ಉತ್ತರಾಖಾಂಡದಲ್ಲಿ ಸಂಭವಿಸಿದ ಜಲ ಪ್ರಳಯದಲ್ಲಿ ಸಾವಿರಾರು ಜನ ಜಲಸಮಾಧಿಯಾಗಿದ ಘಟನೆ ಇಲ್ಲಿ ಸ್ಮರಣೀಯ.