ಮಡಿಕೇರಿ: ಕೊಡಗು ಜಿಲ್ಲೆಯ ಮಾಜಿ ಸೈನಿಕರ ಸಮ್ಮೇಳನ ನಗರದಲ್ಲಿ ಆಗಸ್ಟ್ 6ರಂದು ನಡೆಯಲಿದ್ದು, ಭಾರತೀಯ ಭೂಸೇನಾ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ದಲ್ಬೀರ್ ಸಿಂಗ್ ಸುಹಾಗ್, ದಕ್ಷಿಣ ವಲಯದ ಸೇನಾ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಬಿಪಿನ್ ರಾವತ್ ಸಮ್ಮೇಳನದ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ನಗರದ ಕ್ರಿಸ್ಟಲ್ ಹಾಲ್ನಲ್ಲಿ ಆಯೋಜಿಸಲಾಗಿರುವ ಸಮ್ಮೇಳನದಲ್ಲಿ 6 ಸಾವಿರಕ್ಕೂ ಹೆಚ್ಚು ಮಾಜಿ ಸೈನಿಕರು ಪಾಲ್ಗೊಳ್ಳಲಿದ್ದು, ಸೇನಾಧಿಕಾರಿಗಳ ಎದುರು ತಮ್ಮ ಅಹವಾಲುಗಳನ್ನು ಸಲ್ಲಿಸಲಿದ್ದಾರೆ ಎಂದು ಆಯೋಜಕರು ತಿಳಿಸಿದ್ದಾರೆ.
ಅಂದು ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಜನರಲ್ ಕೆ.ಎಸ್.ತಿಮ್ಮಯ್ಯ ಮ್ಯೂಸಿಯಂನ ಕಾಮಗಾರಿಯನ್ನು ಸೇನಾಧಿಕಾರಿಗಳು ಪರಿಶೀಲನೆ ನಡೆಸಲಿದ್ದಾರೆ. ಬಳಿಕ ಸಮ್ಮೇಳನ ಆರಂಭವಾಗಲಿದೆ. ಇದೇ ಸಂದರ್ಭದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತು ಸೇನಾಧಿಕಾರಿಗಳಿಗೆ ಎಂದು ಮಾಹಿತಿ ನೀಡಿದ್ದಾರೆ.