ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮದ್ದೂರು: ಎಚ್‌1–-ಎನ್1 ಸೋಂಕಿಗೆ ರೈತ ಸಾವು

Last Updated 31 ಜುಲೈ 2014, 19:30 IST
ಅಕ್ಷರ ಗಾತ್ರ

ಮದ್ದೂರು: - ಎಚ್‌1–-ಎನ್1 ಸೋಂಕಿ-­ನಿಂದ ಇಲ್ಲಿಗೆ ಸಮೀಪದ ರಾಂಪುರ ಗ್ರಾಮ­ದಲ್ಲಿ ರೈತ ರಮೇಶ್ (45) ಸಾವನ್ನಪ್ಪಿದ ಘಟನೆ ಗುರುವಾರ ನಡೆದಿದೆ.

ರಮೇಶ್‌ ಅವರಿಗೆ 15 ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿತು. ಅವರನ್ನು ಮಂಡ್ಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ 8 ದಿನಗಳ ಬಳಿಕ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮತ್ತೊಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಗುರುವಾರ ಬೆಳಗಿನ ಜಾವ ಚಿಕಿತ್ಸೆಗೆ ಸ್ಪಂದಿಸದೆ ರಮೇಶ್‌ ಕೊನೆಯುಸಿ­ರೆಳೆ­ದರು. ಅವರಿಗೆ ಎಚ್ 1-ಎನ್ 1 ಸೋಂಕು ತಗುಲಿತ್ತು ಎಂದು ಆಸ್ಪತ್ರೆ ವೈದ್ಯರು ದೃಢೀಕರಿಸಿದ್ದಾರೆ.

ಗ್ರಾಮದಲ್ಲಿ ಇದೀಗ ರೈತ ರಮೇಶ್ ಸಾವಿನಿಂದಾಗಿ ಆತಂಕದ ವಾತಾವರಣ ಕವಿದಿದೆ. ಗ್ರಾಮಕ್ಕೆ  ತಾಲ್ಲೂಕು ಪಂಚಾ­ಯಿತಿ ಸದಸ್ಯ ಸಂದರ್ಶ, ತಹಶೀಲ್ದಾರ್ ಮಂಜೇಗೌಡ, ತಾಲ್ಲೂಕು ಆರೋಗ್ಯಾ­ಧಿಕಾರಿ ಡಾ.ನಿರಂಜನ್‌  ಭೇಟಿ ನೀಡಿ ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದರು. ಗ್ರಾಮದಲ್ಲಿ ಚರಂಡಿಗಳನ್ನು ಸ್ವಚ್ಛಗೊ­ಳಿಸದ ಕಾರಣ ಎಚ್‌1-–ಎನ್1 ಸೋಂಕು ಎಲ್ಲೆಡೆ ವ್ಯಾಪಿಸಿದೆ. ಕೂಡಲೇ ಚರಂಡಿಗಳ ಶುಚಿಗೆ ಗ್ರಾಮ ಪಂಚಾಯಿತಿ ಮುಂದಾಗಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT