ನವದೆಹಲಿ: (ಪಿಟಿಐ) ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆ ಅನುಭವಿಸುತ್ತಿರುವ ಮಧ್ಯೆಯೇ, ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಮಧ್ಯಾಹ್ನದ ಹೊತ್ತಿಗೆ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಲಿದ್ದಾರೆ.
ಪ್ರಧಾನಿ ಮನಮೋಹನ ಸಿಂಗ್ ಅವರ ಗೌರವಾರ್ಥ ಏರ್ಪಡಿಸಿದ್ದ ಔತಣಕೂಟದಲ್ಲಿ ಭಾಗವಹಿಸದೇ ಇದ್ದ ರಾಹುಲ್ ಗಾಂಧಿ, ಈಗಾಗಲೇ ನವದೆಹಲಿಗೆ ವಾಪಸಾಗಿದ್ದಾರೆ. ರಾಹುಲ್ ಹಾಗೂ ಸೋನಿಯಾ ಪತ್ರಕರ್ತರ ಎದುರು ಮಧ್ಯಾಹ್ನದ ಹೊತ್ತಿಗೆ ಬರಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.