ಶಿರಾಳಕೊಪ್ಪ (ಶಿವಮೊಗ್ಗ ಜಿಲ್ಲೆ): ರಾಣೆಬೆನ್ನೂರಿನಿಂದ ಮಣಿಪಾಲಕ್ಕೆ ಹೊರಟಿದ್ದ ಖಾಸಗಿ ಬಸ್ಸೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸೇರಿ ಇಬ್ಬರು ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಶಿರಾಳಕೊಪ್ಪದ ಮಂಚಿಕೊಪ್ಪ ಕ್ರಾಸ್ ಬಳಿ ನಡೆದಿದೆ.
ಗುರುಕಿರಣ್ (14) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ಇನ್ನೊಬ್ಬರ ಗುರುತು ಪತ್ತೆಯಾಗಿಲ್ಲ.
ಸುಗಮ ಹೆಸರಿನ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ.