ಮುಂಬೈ (ಪಿಟಿಐ): ಮಹಾರಾಷ್ಟ್ರ ರಾಜ್ಯಸಚಿವಾಲಯದ ಕಚೇರಿ ಕಟ್ಟಡದ ಮೊದಲ ಮಹಡಿಯಲ್ಲಿ ಶಾರ್ಟ್ ಸರ್ಕಿಟ್ನಿಂದ ಸೋಮವಾರ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯಿಂದಾಗಿ ಯಾವುದೇ ಅನಾಹುತ ಉಂಟಾಗಿಲ್ಲ.
ಮಧ್ಯಾಹ್ನ 3.45ರ ಸುಮಾರಿಗೆ ಶಾರ್ಟ್ ಸರ್ಕಿಟ್ನಿಂದಾಗಿ ಸಾಮಾಜಿಕ ನ್ಯಾಯ ಇಲಾಖೆ ಕಾರ್ಯದರ್ಶಿ ಆರ್.ಡಿ.ಶಿಂಧೆ ಹಾಗೂ ಬುಡಕಟ್ಟು ವ್ಯವಹಾರಗಳ ರಾಜ್ಯ ಸಚಿವ ರಾಜೇಂದ್ರ ಗವಿಟ್ ಕಚೇರಿಯಲ್ಲಿ ಬೆಂಕಿ ಕಾಣಿಸಿಕೊಂಡಿತು. ಕಟ್ಟಡದಲ್ಲಿದ್ದ ಜನರನ್ನು ಸ್ಥಳಾಂತರಿಸಿ, ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಯಿತು.
‘ಇದೊಂದು ಸಣ್ಣ ಘಟನೆ. ಮೂರು ಅಗ್ನಿಶಾಮಕದಳ, ಎರಡು ನೀರಿನ ಟ್ಯಾಂಕರ್ ಹಾಗೂ ಒಂದು ಜಂಬೊ ಟ್ಯಾಂಕರ್ಗಳು ಸ್ಥಳಕ್ಕೆ ದೌಡಾಯಿಸಿದವು’ ಎಂದು ಅಗ್ನಿಶಾಮಕದಳದ ಹಿರಿಯ ಅಧಿಕಾರಿ ತಿಳಿಸಿದ್ದಾರೆ.
2012ರ ಜೂನ್ 21ರಂದು ಇದೇ ಕಟ್ಟಡದ ಆರನೇ ಮಹಡಿಯಲ್ಲಿ ಅಗ್ನಿ ದುರಂತ ಸಂಭವಿಸಿ ಐದು ಜನರು ಸಾವನ್ನಪ್ಪಿದ್ದರು.