ಹುಮನಾಬಾದ್: ಮಹಿಳೆಯರು ಮತ್ತು ಮಕ್ಕಳಿಗೆ ಭದ್ರತೆ ಒದಗಿಸಲು ಪೊಲೀಸ್ ಇಲಾಖೆ ಸಿದ್ಧ ಎಂದು ಡಿವೈಎಸ್ಪಿ ಅಮರನಾಥರೆಡ್ಡಿ ಹೇಳಿದರು.
ಇಲ್ಲಿನ ಇಂದಿರಾ ನಗರದ ಡಾ.ಅಂಬೇಡ್ಕರ್ ಸಮುದಾಯ ಭವನದಲ್ಲಿ ಮಹಿಳೆಯರು ಹಾಗೂ ಮಕ್ಕಳ ಸಂರಕ್ಷಣೆ ಕುರಿತು ಈಚೆಗೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪಾಲಕರು ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಬೇಕು. ಮಹಿಳಾ ಮೀಸಲಾತಿ ಅಡಿಯಲ್ಲಿ ಉದ್ಯೋಗ ಪಡೆಯಬಹುದು. ಪ್ರೌಢಶಾಲೆ ಹಾಗೂ ಕಾಲೇಜು ಹಂತದ ವಿದ್ಯಾರ್ಥಿನಿಯರಿಗೆ ಮೊಬೈಲ್ ನೀಡುವುದನ್ನು ತಕ್ಷಣವೇ ಕೈಬಿಡಬೇಕು ಎಂದರು.
ಪುರಸಭೆ ಅಧ್ಯಕ್ಷ ವಿನಾಯಕ ಯಾದವ್ ಮಾತನಾಡಿ, ದೇಶದಲ್ಲಿ ನಡೆಯುತ್ತಿರುವ ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣ ಕುರಿತು ಕಳವಳ ವ್ಯಕ್ತಪಡಿಸಿದರು. ಉಪ ವಿಭಾಗ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳು ಉತ್ತಮ ಕೆಲಸ ಮಾಡುತ್ತಿದ್ದಾರೆ. ಹೆಚ್ಚಿನ ಭದ್ರತೆ ಒದಗಿಸಲು ಹೊಸ ಯೋಜನೆ ರೂಪಿಸಬೇಕು ಎಂದರು.
ಇನ್ಸ್ಪೆಕ್ಟರ್ ದತ್ತಾತ್ರೇಯ, ಸಬ್ ಇನ್ಸ್ಪೆಕ್ಟರ್ ಎಲ್.ಬಿ.ಅಗ್ನಿ, ಸಮುದಾಯ ಸಮನ್ವಯ ಅಧಿಕಾರಿ ಮೀನಾಕುಮಾರಿ ಬೋರಾಳ್ಕರ್, ಧರ್ಮರಾಯ ಘಾಂಗ್ರೆ ಮಾತನಾಡಿದರು. ಪರಮೇಶ್ವರ ಆರ್ಯ, ಗೌತಮ್ ಮೇಟಿ, ಖಾಜಾ ಪಟೇಲ್ ಶೇರಿಕಾರ ಇದ್ದರು.