ಪಟ್ನಾ (ಪಿಟಿಐ): ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಉತ್ತರ ಪ್ರದೇಶದ ಬಿಜೆಪಿ ಮುಖಂಡ ದಯಾಶಂಕರ್ ಸಿಂಗ್ ಅವರನ್ನು ಬಿಹಾರದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶ ಮತ್ತು ಬಿಹಾರ ರಾಜ್ಯಗಳ ಗಡಿ ಭಾಗದಲ್ಲಿರುವ ಬುಕ್ಸಾರ್ ಪಟ್ಟಣದಲ್ಲಿ ದಯಾಶಂಕರ್ ಸಿಂಗ್ ಅವರನ್ನು ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಪೊಲೀಸರು ಬಂಧಿಸಿದ್ದಾರೆ.
ದಯಾಶಂಕರ್ ಸಿಂಗ್ ಅವರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸರ್ ವರಿಷ್ಠಾಧಿಕಾರಿ ಉಪೇಂದ್ರ ಕುಮಾರ್ ಖಚಿತಪಡಿಸಿದ್ದಾರೆ.
ಮಾಯವತಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರಿಂದ ದೇಶದಾದ್ಯಂತ ವ್ಯಾಪಕ ಪ್ರತಿಭಟನೆ ವ್ಯಕ್ತವಾಗಿತ್ತು.
ದಯಾಶಂಕರ್ ಹಲವು ದಿನಗಳಿಂದ ಪೊಲೀಸರ ಕೈಗೆ ಸಿಗದೆ ತಲೆ ಮರೆಸಿಕೊಂಡಿದ್ದರು.