ನವದೆಹಲಿ (ಪಿಟಿಐ): ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಗೋಪಿನಾಥ್ ಮುಂಡೆ ರಸ್ತೆ ಅಪಘಾತದಲ್ಲಿ ಸತ್ತಿರುವ ಪ್ರಕರಣದ ವಿಚಾರಣೆ ನಡೆಸಲು ಸಿಬಿಐ ಸಿದ್ಧವಾಗಿದೆ. ಕೇಂದ್ರ ಗೃಹ ಸಚಿವಾಲಯವು ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಲು ನಿರ್ಧರಿಸಿದ್ದು, ಪ್ರಧಾನಿ ಅಧೀನದಲ್ಲಿರುವ ಸಿಬ್ಬಂದಿ ಮತ್ತು ತರಬೇತಿ ಇಲಾಖೆಗೆ ಪ್ರಸ್ತಾವನೆಯನ್ನು ಕಳುಹಿಸಿದೆ.
ಸಿಬ್ಬಂದಿ ಮತ್ತು ತರಬೇತಿ ಇಲಾಖೆ ತನಿಖೆಯ ಬಗ್ಗೆ ಅಧಿಕೃತ ಅಧಿಸೂಚನೆ ಹೊರಡಿಸಿದ ನಂತರ ಸಿಬಿಐ ತನಿಖೆಯನ್ನು ಆರಂಭಿಸಲಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ, ಮಹಾರಾಷ್ಟ್ರ ಬಿಜೆಪಿ ಘಟಕದ ಅಧ್ಯಕ್ಷ ದೇವೇಂದ್ರ ಫಡ್ನಾವಿಸ್ ಮತ್ತು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಸಿಬಿಐ ತನಿಖೆಗೆ ಆಗ್ರಹಿಸಿದ್ದರು.