<p><strong>ನವದೆಹಲಿ (ಪಿಟಿಐ): </strong>ದೇಶದಾದ್ಯಂತ ಅಂತರ್ಜಾಲ ಸ್ವಾತಂತ್ರ್ಯಕ್ಕೆ ಸಂಬಂಧಿಸಿದಂತೆ (ಮುಕ್ತ ಅಂತರ್ಜಾಲ) ನಡೆಯುತ್ತಿರುವ ಚರ್ಚೆಗೆ ಈಗ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸಹ ಕೈಜೋಡಿಸಿದ್ದಾರೆ.<br /> <br /> ಬುಧವಾರ ಬಜೆಟ್ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ಅಂತರ್ಜಾಲ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ವಿಚಾರದಲ್ಲಿ ಸರ್ಕಾರ ತಟಸ್ಥ ಧೋರಣೆ ಅನುಸರಿಸುತ್ತಿರುವುದನ್ನು ಖಂಡಿಸಿದರು. ಪ್ರಶ್ನೋತ್ತರ ಅವಧಿಯನ್ನು ರದ್ದುಗೊಳಿಸಿ ಕೂಡಲೇ ಚರ್ಚೆಗೆ ಅವಕಾಶ ನೀಡಬೇಕು, ನಿಲುವಳಿ ಸೂಚನೆ ಅಂಗೀಕರಿಸಬೇಕು ಎಂದು ಆಗ್ರಹಿಸಿದರು.<br /> <br /> ಅಂತರ್ಜಾಲ ಸ್ವಾತಂತ್ರ್ಯ ವಿಚಾರದಲ್ಲಿ ಕೇಂದ್ರ ಸರ್ಕಾರ ತಟಸ್ಥ ಧೋರಣೆ ಅನುಸರಿಸುತ್ತಿದೆ. ಇದರ ವಿರುದ್ಧ ಖಂಡನಾ ನಿರ್ಣಯ ಅಂಗೀಕರಿಸಬೇಕು ಎಂದು ಅವರು ಹೇಳಿದರು. ಆದರೆ, ನಿರ್ಣಯ ಅಂಗೀಕರಿಸಬೇಕೇ ಬೇಡವೇ ಎನ್ನುವುದನ್ನು ಸ್ಪೀಕರ್ ನಿರ್ಧರಿಸಲಿದ್ದಾರೆ.<br /> <br /> ಮಂಗಳವಾರ ಕೆಳಮನೆಯಲ್ಲಿ ಕೂಡ ಅಂತರ್ಜಾಲ ಸ್ವಾತಂತ್ರ್ಯದ ಕುರಿತು ಬಿರುಸಿನ ಚರ್ಚೆ ನಡೆದಿತ್ತು.<br /> <br /> <strong>ಹಿನ್ನೆಲೆ:</strong> ದೂರಸಂಪರ್ಕ ಸಂಸ್ಥೆ ಭಾರ್ತಿ ಏರ್ಟೆಲ್ ಈಚೆಗೆ ‘ಏರ್ಟೆಲ್ ಝೀರೊ’ ಎಂಬ ವ್ಯವಸ್ಥೆಗೆ ಚಾಲನೆ ನೀಡಿದ ನಂತರ ಅಂತರ್ಜಾಲ ಸ್ವಾತಂತ್ರ್ಯದ ಚರ್ಚೆ ಆರಂಭ ಗೊಂಡಿತ್ತು. ಈ ವ್ಯವಸ್ಥೆಯ ಪ್ರಕಾರ ಕೆಲವು ನಿರ್ದಿಷ್ಟ ಆ್ಯಪ್ಗಳು ಉಚಿತವಾಗಿ ಲಭ್ಯವಾಗಲಿವೆ. ಅದರ ಶುಲ್ಕವನ್ನು ಆ್ಯಪ್ ತಯಾರಿಸಿದ ಸಂಸ್ಥೆಗಳೇ ಭರಿಸುತ್ತವೆ.<br /> <br /> ಆದರೆ, ಈ ಕ್ರಮ ಕೆಲವೇ ಕೆಲವರ ಏಕಸ್ವಾಮ್ಯಕ್ಕೆ ಕಾರಣವಾಗುತ್ತದೆ. ಸಣ್ಣ ಸಂಸ್ಥೆಗಳು ಮುಚ್ಚಿ ಹೋಗುತ್ತವೆ ಎಂದು ಅಂತರ್ಜಾಲ ಸ್ವಾತಂತ್ರ್ಯದ ಪ್ರತಿಪಾದಕರು ಮತ್ತು ಉದ್ಯಮ ಸಂಸ್ಥೆಗಳು ಹೇಳುತ್ತವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ದೇಶದಾದ್ಯಂತ ಅಂತರ್ಜಾಲ ಸ್ವಾತಂತ್ರ್ಯಕ್ಕೆ ಸಂಬಂಧಿಸಿದಂತೆ (ಮುಕ್ತ ಅಂತರ್ಜಾಲ) ನಡೆಯುತ್ತಿರುವ ಚರ್ಚೆಗೆ ಈಗ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸಹ ಕೈಜೋಡಿಸಿದ್ದಾರೆ.<br /> <br /> ಬುಧವಾರ ಬಜೆಟ್ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ಅಂತರ್ಜಾಲ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ವಿಚಾರದಲ್ಲಿ ಸರ್ಕಾರ ತಟಸ್ಥ ಧೋರಣೆ ಅನುಸರಿಸುತ್ತಿರುವುದನ್ನು ಖಂಡಿಸಿದರು. ಪ್ರಶ್ನೋತ್ತರ ಅವಧಿಯನ್ನು ರದ್ದುಗೊಳಿಸಿ ಕೂಡಲೇ ಚರ್ಚೆಗೆ ಅವಕಾಶ ನೀಡಬೇಕು, ನಿಲುವಳಿ ಸೂಚನೆ ಅಂಗೀಕರಿಸಬೇಕು ಎಂದು ಆಗ್ರಹಿಸಿದರು.<br /> <br /> ಅಂತರ್ಜಾಲ ಸ್ವಾತಂತ್ರ್ಯ ವಿಚಾರದಲ್ಲಿ ಕೇಂದ್ರ ಸರ್ಕಾರ ತಟಸ್ಥ ಧೋರಣೆ ಅನುಸರಿಸುತ್ತಿದೆ. ಇದರ ವಿರುದ್ಧ ಖಂಡನಾ ನಿರ್ಣಯ ಅಂಗೀಕರಿಸಬೇಕು ಎಂದು ಅವರು ಹೇಳಿದರು. ಆದರೆ, ನಿರ್ಣಯ ಅಂಗೀಕರಿಸಬೇಕೇ ಬೇಡವೇ ಎನ್ನುವುದನ್ನು ಸ್ಪೀಕರ್ ನಿರ್ಧರಿಸಲಿದ್ದಾರೆ.<br /> <br /> ಮಂಗಳವಾರ ಕೆಳಮನೆಯಲ್ಲಿ ಕೂಡ ಅಂತರ್ಜಾಲ ಸ್ವಾತಂತ್ರ್ಯದ ಕುರಿತು ಬಿರುಸಿನ ಚರ್ಚೆ ನಡೆದಿತ್ತು.<br /> <br /> <strong>ಹಿನ್ನೆಲೆ:</strong> ದೂರಸಂಪರ್ಕ ಸಂಸ್ಥೆ ಭಾರ್ತಿ ಏರ್ಟೆಲ್ ಈಚೆಗೆ ‘ಏರ್ಟೆಲ್ ಝೀರೊ’ ಎಂಬ ವ್ಯವಸ್ಥೆಗೆ ಚಾಲನೆ ನೀಡಿದ ನಂತರ ಅಂತರ್ಜಾಲ ಸ್ವಾತಂತ್ರ್ಯದ ಚರ್ಚೆ ಆರಂಭ ಗೊಂಡಿತ್ತು. ಈ ವ್ಯವಸ್ಥೆಯ ಪ್ರಕಾರ ಕೆಲವು ನಿರ್ದಿಷ್ಟ ಆ್ಯಪ್ಗಳು ಉಚಿತವಾಗಿ ಲಭ್ಯವಾಗಲಿವೆ. ಅದರ ಶುಲ್ಕವನ್ನು ಆ್ಯಪ್ ತಯಾರಿಸಿದ ಸಂಸ್ಥೆಗಳೇ ಭರಿಸುತ್ತವೆ.<br /> <br /> ಆದರೆ, ಈ ಕ್ರಮ ಕೆಲವೇ ಕೆಲವರ ಏಕಸ್ವಾಮ್ಯಕ್ಕೆ ಕಾರಣವಾಗುತ್ತದೆ. ಸಣ್ಣ ಸಂಸ್ಥೆಗಳು ಮುಚ್ಚಿ ಹೋಗುತ್ತವೆ ಎಂದು ಅಂತರ್ಜಾಲ ಸ್ವಾತಂತ್ರ್ಯದ ಪ್ರತಿಪಾದಕರು ಮತ್ತು ಉದ್ಯಮ ಸಂಸ್ಥೆಗಳು ಹೇಳುತ್ತವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>