ಲೋಕಸಭೆ ಚುನಾವಣೆಯಲ್ಲಿ ಜೆಡಿಯು ದಯನೀಯ ಸೋಲಿನ ನೈತಿಕ ಹೊಣೆ ಹೊತ್ತ ನಿತೀಶ್, ಶನಿವಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ನೂತನ ನಾಯಕನ ಆಯ್ಕೆ ಕುರಿತಾಗಿ ಇಂದು ಜೆಡಿಯು ಶಾಸಕಾಂಗ ಪಕ್ಷದ ಸಭೆ ನಡೆಸಲಾಯಿತು.
'ಸಭೆಯಲ್ಲಿ ಹಾಜರಿದ್ದ ಎಲ್ಲರೂ ನಿತೀಶ್ ಮೇಲೆ ಸಂಪೂರ್ಣ ನಂಬಿಕೆ ಇಟ್ಟಿದ್ದು, ಪಕ್ಷದ ನಾಯಕರಾಗಿ ಪುನರಾಯ್ಕೆ ಮಾಡಲು ಸರ್ವಾನುಮತದ ಒಪ್ಪಿಗೆ ಸೂಚಿಸಿದ್ದಾರೆ. ಈ ಕುರಿತು ಶೀಘ್ರವೇ ನಿರ್ಧಾರ ಪ್ರಕಟಿಸಲಾಗುವುದು’ ಎಂದು ಜೆಡಿಯು ಹಿರಿಯ ಶಾಸಕ ನರೇಂದ್ರ ಸಿಂಗ್ ತಿಳಿಸಿದರು.