ಚೆನ್ನೈ (ಪಿಟಿಐ): ಕರ್ನಾಟಕವು ಮೇಕೆದಾಟು ಬಳಿ ಕಾವೇರಿ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸಲು ಉದ್ದೇಶಿಸಿರುವುದಕ್ಕೆ ವಿರೋಧ ವ್ಯಕ್ತಪಡಿಸಿರುವ ತಮಿಳುನಾಡಿನ ವಿವಿಧ ರಾಜಕೀಯ ಪಕ್ಷಗಳು ಪ್ರತಿಭಟನೆ ನಡೆಸಲು ಮುಂದಾಗಿವೆ.
ಈ ಬಗ್ಗೆ ಚರ್ಚಿಸಲು ಸಿಪಿಐ ರಾಜ್ಯ ಘಟಕ ವಿವಿಧ ಪಕ್ಷಗಳ ಮುಖಂಡರಿಗೆ ಪತ್ರ ಬರೆದಿದೆ. ರಾಜ್ಯದ ಸರ್ವ ಪಕ್ಷಗಳ ಸಭೆ ನಡೆಸಿ, ಪ್ರತಿಭಟನೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕಾರ್ಯದರ್ಶಿ ಡಿ. ಪಾಂಡಿಯನ್ ತಿಳಿಸಿದ್ದಾರೆ.