ನವದೆಹಲಿ: ಮೇಕೆದಾಟು ವಿದ್ಯುತ್ ಯೋಜನೆ ವಿರುದ್ಧ ತಮಿಳುನಾಡು ಸಲ್ಲಿಸಿರುವ ಅರ್ಜಿಯನ್ನು ವಜಾ ಮಾಡಬೇಕು ಎಂದು ಸುಪ್ರೀಂ ಕೋರ್ಟ್ಗೆ ಸೋಮವಾರ ಕರ್ನಾಟಕ ಅರ್ಜಿ ಸಲ್ಲಿಸಿದೆ.
ಪ್ರಸ್ತಾವಿತ ಯೋಜನೆಗೆ ವಿವರವಾದ ಯೋಜನಾ ವರದಿ ಸಲ್ಲಿಸುವುದಕ್ಕಾಗಿ ಪ್ರಮುಖ ಕಂಪೆನಿಗಳಿಂದ ಇಂಗಿತ ಪತ್ರವನ್ನಷ್ಟೇ ಆಹ್ವಾನಿಸಲಾಗಿದೆ ಎಂದು ಅರ್ಜಿಯಲ್ಲಿ ಸ್ಪಷ್ಟಪಡಿಸಲಾಗಿದೆ.
ಕರ್ನಾಟಕದ ವ್ಯಾಪ್ತಿಯಲ್ಲಿರುವ ಪ್ರದೇಶದಲ್ಲಿ ಸಂಪೂರ್ಣವಾಗಿ ವಿದ್ಯುತ್ ಉತ್ಪಾದನೆಯ ಉದ್ದೇಶದಿಂದ ಈ ಯೋಜನೆ ರೂಪಿಸಲಾಗುತ್ತಿದೆ ಎಂದು ರಾಜ್ಯ ಹೇಳಿದೆ. ತಮಿಳುನಾಡಿನ ಪಾಲಿನ ನೀರನ್ನು ಯೋಜನೆಗಾಗಿ ಬಳಸಿಕೊಳ್ಳುತ್ತಿಲ್ಲ. ಹಾಗಾಗಿ ಈ ಬಗ್ಗೆ ತಮಿಳುನಾಡು ಚಿಂತೆ ಮಾಡುವ ಅಗತ್ಯ ಇಲ್ಲ. ಆದ್ದರಿಂದ ತಮಿಳನಾಡಿನ ಅರ್ಜಿಯನ್ನು ವಜಾ ಮಾಡಬೇಕು ಎಂದು ಕರ್ನಾಟಕ ಕೋರಿದೆ.