ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಘಾಲಯದಲ್ಲಿ ಪ್ರವಾಹ: ಮೃತರ ಸಂಖ್ಯೆ 55ಕ್ಕೆ ಏರಿಕೆ

Last Updated 30 ಸೆಪ್ಟೆಂಬರ್ 2014, 19:30 IST
ಅಕ್ಷರ ಗಾತ್ರ

ಶಿಲ್ಲಾಂಗ್‌ (ಪಿಟಿಐ): ಭೀಕರ ಪ್ರವಾಹ ಮತ್ತು ಭೂಕುಸಿತದ ಪರಿಣಾಮ ಮೇಘಾಲಯದಲ್ಲಿ ಮಂಗಳವಾರ ಮತ್ತೆ ಮೂರು ಶವಗಳನ್ನು ಹೊರಕ್ಕೆ ತೆಗೆಯ­ಲಾಗಿದ್ದು, ಈ ಮೂಲಕ ಮೃತಪಟ್ಟವರ ಸಂಖ್ಯೆ 55ಕ್ಕೆ ಏರಿದೆ ಎಂದು ಮುಖ್ಯ ಕಾರ್ಯದರ್ಶಿ ಬಾರ್ಕೋಸ್‌ ಒ ವಾರ್‌ಜ್ರಿ ತಿಳಿಸಿದ್ದಾರೆ.

ಅಧಿಕಾರಿಗಳು, ಪೊಲೀಸ್‌ ಇಲಾ­­ಖೆಯ ಸಿಬ್ಬಂದಿ ಮೃತಪಟ್ಟವರ ಗುರುತು ಪತ್ತೆ ಹಚ್ಚಲು ಪ್ರಯತ್ನ ನಡೆಸಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಈ ನಡುವೆ ಮುಖ್ಯಮಂತ್ರಿ ಮುಕುಲ್‌ ಸಂಗ್ಮ ಅವರು, ಪ್ರವಾಹದಿಂದಾಗಿ ತೊಂದರೆಗೆ ಸಿಲುಕಿದವರಿಗೆ ಸಹಾಯ ಮಾಡಲು ಮುಖ್ಯಮಂತ್ರಿ ಪರಿಹಾರ ನಿಧಿಗೆ ಉದಾರ ದೇಣಿಗೆ ನೀಡುವಂತೆ ಸಾರ್ವಜನಿಕರಿಗೆ ಕರೆ ನೀಡಿದ್ದಾರೆ.

ಪ್ರವಾಹದ ಭೀಕರತೆಯಿಂದಾಗಿ ರಸ್ತೆಗಳು, ಮನೆಗಳು, ವಸತಿಪ್ರದೇಶ ಮತ್ತು ಕೃಷಿಭೂಮಿ ಸೇರಿ ಒಟ್ಟು 2 ಸಾವಿರ ಕೋಟಿ ಹಾನಿಯಾಗಿದೆ ಎಂದು ಉಪಮುಖ್ಯಮಂತ್ರಿ ರೋಯಿತ್ರೆ ಸಿ. ಲಾಲೂ ಅವರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT