ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇ 17ಕ್ಕೆ ಜಯಲಲಿತಾ ಪ್ರಮಾಣ ವಚನ?

Last Updated 11 ಮೇ 2015, 14:16 IST
ಅಕ್ಷರ ಗಾತ್ರ

ಚೆನ್ನೈ (ಏಜೆನ್ಸೀಸ್‌): ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ನಿರ್ದೋಷಿ ಎಂದು ಸಾಬೀತಾಗಿರುವ ಎಐಎಡಿಎಂಕೆ ನಾಯಕಿ ಜಯಲಲಿತಾ ಅವರು ಮೇ 17ರಂದು ಮತ್ತೆ ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.

ಕರ್ನಾಟಕ ಹೈಕೋರ್ಟ್‌ನ ತೀರ್ಪಿಗೆ ಪ್ರತಿಕ್ರಿಯಿಸಿರುವ ಪ್ರಕರಣದ ದೂರುದಾರ ಹಾಗೂ ಬಿಜೆಪಿ ಮುಖಂಡ ಸುಬ್ರಹ್ಮಣಿಯನ್‌ ಸ್ವಾಮಿ, ಈ ತೀರ್ಪಿನಿಂದ ಆಘಾತವಾಗಿದೆ ಎಂದಿದ್ದಾರೆ. ಈ ತೀರ್ಪಿನ ವಿರುದ್ಧ ಮೇಲ್ಮನವಿ ಅರ್ಜಿ ಸಲ್ಲಿಸುವುದಾಗಿ ಸ್ವಾಮಿ ಹೇಳಿದ್ದಾರೆ.

ನ್ಯಾಯಾಲಯದ ತೀರ್ಪು ಹೊರ ಬೀಳುತ್ತಿದ್ದಂತೆ ಚೆನ್ನೈನ ಜಯಲಲಿತಾ ಅವರ ನಿವಾಸದ ಎದುರು ಜಮಾಯಿಸಿದ್ದ ನೂರಾರು ಮಂದಿ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿದ ಎಐಎಡಿಎಂಕೆ ಕಾರ್ಯಕರ್ತರು ಜಯಲಲಿತಾ ಅವರಿಗೆ ಜಯಕಾರ ಕೂಗಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT