<p><strong>ನವದೆಹಲಿ(ಪಿಟಿಐ): </strong>ಗೋವಾದ ಪಣಜಿಯಲ್ಲಿ ಶುಕ್ರವಾರ ಆರಂಭವಾಗುವ ಮೂರು ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಮುಂಬರುವ ಲೋಕಸಭಾ ಚುನಾವಣೆ ಸಂದರ್ಭ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ವಹಿಸಬೇಕಾದ ಪಾತ್ರದ ಕುರಿತು ಸ್ಪಷ್ಟ ಸಂದೇಶ ರವಾನೆಯಾಗುವ ಸಾಧ್ಯತೆಗಳಿವೆ.<br /> <br /> ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಮೋದಿ ಅವರನ್ನು ನೇಮಿಸುವ ಕುರಿತು ಬಿಜೆಪಿಯ ಕೆಲ ಮುಖಂಡರು ತೀವ್ರ ಒತ್ತಡ ತರುತ್ತಿರುವ ಹಿನ್ನೆಲೆಯಲ್ಲಿ ಈ ಘೋಷಣೆ ಮಾಡುವ ನಿರೀಕ್ಷೆ ಇದೆ ಎಂದು ಪಕ್ಷದ ವಕ್ತಾರ ರಾಜೀವ್ ಪ್ರತಾಪ್ ರೂಡಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.<br /> <br /> ಮೋದಿ ಅವರನ್ನೇ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಲು ಕಾರ್ಯಕಾರಿಣಿಯಲ್ಲಿ ಕೆಲವು ನಾಯಕರು ಬೇಡಿಕೆ ಇಡುವ ಸಾಧ್ಯತೆ ಇದ್ದರೂ ಈ ಕುರಿತು ಪಕ್ಷದ ವರಿಷ್ಠರಲ್ಲಿ ಇನ್ನೂ ಸರ್ವಸಮ್ಮತ ಅಭಿಪ್ರಾಯ ಮೂಡಿಬಂದಿಲ್ಲ. ಆದಾಗ್ಯೂ ಈ ಕುರಿತು ಎದ್ದಿರುವ ಗೊಂದಲಗಳಿಗೆ ತೆರೆ ಎಳೆಯಲು ಪಕ್ಷದ ಅಧ್ಯಕ್ಷ ರಾಜನಾಥ ಸಿಂಗ್ ಸ್ಪಷ್ಟ ಸಂದೇಶ ನೀಡುವ ಸಾಧ್ಯತೆ ಇದ್ದು ಇಂತಹ ಘೋಷಣೆ ಮಾಡುವುದಕ್ಕೂ ಮುನ್ನ ಪಕ್ಷದ ಹಿರಿಯ ನಾಯಕರಲ್ಲದೆ ಸಂಸದೀಯ ಮಂಡಳಿ ಸದಸ್ಯರೊಂದಿಗೆ ಅವರು ಇದೀಗ ಸಮಾಲೋಚನೆಯಲ್ಲಿ ತೊಡಗಿದ್ದಾರೆ ಎನ್ನಲಾಗಿದೆ.<br /> <br /> ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳುತ್ತಿರುವ ಮೋದಿಯ ಕೆಲ ಕಟ್ಟಾ ಬೆಂಬಲಿಗರು, ಮೋದಿ ಅವರನ್ನೇ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಲು ಬಹಿರಂಗ ಬೇಡಿಕೆ ಮಂಡಿಸುವ ಆತಂಕವೂ ಕೆಲ ಮುಖಂಡರಲ್ಲಿದೆ.<br /> <br /> <strong>ಸಿನ್ಹಾ ನಿರಾಕರಣೆ</strong>: ಆದರೆ ಪಣಜಿ ಸಭೆಯಲ್ಲಿ ಮೋದಿ ಅವರ ಪಾತ್ರದ ಕುರಿತು ಯಾವುದೇ ಘೋಷಣೆ ಹೊರಬೀಳುವ ಸಾಧ್ಯತೆ ಇಲ್ಲ ಎಂದಿರುವ ಪಕ್ಷದ ಹಿರಿಯ ಮುಖಂಡ ಯಶವಂತ ಸಿನ್ಹಾ `ನಾಯಕತ್ವದ ಕುರಿತು ಘೋಷಣೆ ಮಾಡಲು ಕಾರ್ಯಕಾರಿಣಿಯಂತಹ ಬೃಹತ್ ಸಮಾವೇಶ ಸೂಕ್ತ ಅಲ್ಲ' ಎಂದಿದ್ದಾರೆ.<br /> <br /> ನಾಯಕತ್ವ ವಿಷಯದಂತಹ ಘೋಷಣೆಗಳನ್ನು ಪಕ್ಷದ ಸಂಸದೀಯ ಮಂಡಳಿಯೇ ನಿರ್ಣಯಿಸುತ್ತದೆ ಎಂದು ಸಿನ್ಹಾ ಅಭಿಪ್ರಾಯಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ(ಪಿಟಿಐ): </strong>ಗೋವಾದ ಪಣಜಿಯಲ್ಲಿ ಶುಕ್ರವಾರ ಆರಂಭವಾಗುವ ಮೂರು ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಮುಂಬರುವ ಲೋಕಸಭಾ ಚುನಾವಣೆ ಸಂದರ್ಭ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ವಹಿಸಬೇಕಾದ ಪಾತ್ರದ ಕುರಿತು ಸ್ಪಷ್ಟ ಸಂದೇಶ ರವಾನೆಯಾಗುವ ಸಾಧ್ಯತೆಗಳಿವೆ.<br /> <br /> ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಮೋದಿ ಅವರನ್ನು ನೇಮಿಸುವ ಕುರಿತು ಬಿಜೆಪಿಯ ಕೆಲ ಮುಖಂಡರು ತೀವ್ರ ಒತ್ತಡ ತರುತ್ತಿರುವ ಹಿನ್ನೆಲೆಯಲ್ಲಿ ಈ ಘೋಷಣೆ ಮಾಡುವ ನಿರೀಕ್ಷೆ ಇದೆ ಎಂದು ಪಕ್ಷದ ವಕ್ತಾರ ರಾಜೀವ್ ಪ್ರತಾಪ್ ರೂಡಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.<br /> <br /> ಮೋದಿ ಅವರನ್ನೇ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಲು ಕಾರ್ಯಕಾರಿಣಿಯಲ್ಲಿ ಕೆಲವು ನಾಯಕರು ಬೇಡಿಕೆ ಇಡುವ ಸಾಧ್ಯತೆ ಇದ್ದರೂ ಈ ಕುರಿತು ಪಕ್ಷದ ವರಿಷ್ಠರಲ್ಲಿ ಇನ್ನೂ ಸರ್ವಸಮ್ಮತ ಅಭಿಪ್ರಾಯ ಮೂಡಿಬಂದಿಲ್ಲ. ಆದಾಗ್ಯೂ ಈ ಕುರಿತು ಎದ್ದಿರುವ ಗೊಂದಲಗಳಿಗೆ ತೆರೆ ಎಳೆಯಲು ಪಕ್ಷದ ಅಧ್ಯಕ್ಷ ರಾಜನಾಥ ಸಿಂಗ್ ಸ್ಪಷ್ಟ ಸಂದೇಶ ನೀಡುವ ಸಾಧ್ಯತೆ ಇದ್ದು ಇಂತಹ ಘೋಷಣೆ ಮಾಡುವುದಕ್ಕೂ ಮುನ್ನ ಪಕ್ಷದ ಹಿರಿಯ ನಾಯಕರಲ್ಲದೆ ಸಂಸದೀಯ ಮಂಡಳಿ ಸದಸ್ಯರೊಂದಿಗೆ ಅವರು ಇದೀಗ ಸಮಾಲೋಚನೆಯಲ್ಲಿ ತೊಡಗಿದ್ದಾರೆ ಎನ್ನಲಾಗಿದೆ.<br /> <br /> ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳುತ್ತಿರುವ ಮೋದಿಯ ಕೆಲ ಕಟ್ಟಾ ಬೆಂಬಲಿಗರು, ಮೋದಿ ಅವರನ್ನೇ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಲು ಬಹಿರಂಗ ಬೇಡಿಕೆ ಮಂಡಿಸುವ ಆತಂಕವೂ ಕೆಲ ಮುಖಂಡರಲ್ಲಿದೆ.<br /> <br /> <strong>ಸಿನ್ಹಾ ನಿರಾಕರಣೆ</strong>: ಆದರೆ ಪಣಜಿ ಸಭೆಯಲ್ಲಿ ಮೋದಿ ಅವರ ಪಾತ್ರದ ಕುರಿತು ಯಾವುದೇ ಘೋಷಣೆ ಹೊರಬೀಳುವ ಸಾಧ್ಯತೆ ಇಲ್ಲ ಎಂದಿರುವ ಪಕ್ಷದ ಹಿರಿಯ ಮುಖಂಡ ಯಶವಂತ ಸಿನ್ಹಾ `ನಾಯಕತ್ವದ ಕುರಿತು ಘೋಷಣೆ ಮಾಡಲು ಕಾರ್ಯಕಾರಿಣಿಯಂತಹ ಬೃಹತ್ ಸಮಾವೇಶ ಸೂಕ್ತ ಅಲ್ಲ' ಎಂದಿದ್ದಾರೆ.<br /> <br /> ನಾಯಕತ್ವ ವಿಷಯದಂತಹ ಘೋಷಣೆಗಳನ್ನು ಪಕ್ಷದ ಸಂಸದೀಯ ಮಂಡಳಿಯೇ ನಿರ್ಣಯಿಸುತ್ತದೆ ಎಂದು ಸಿನ್ಹಾ ಅಭಿಪ್ರಾಯಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>