<p><strong>ಬೆಂಗಳೂರು:</strong> ‘ನರೇಂದ್ರ ಮೋದಿ ಅವರನ್ನು ಪ್ರಧಾಶನಿ ಅಭ್ಯರ್ಥಿಯನ್ನಾಗಿ ಬಿಜೆಪಿ ಘೋಷಿಸಿದೆ. ಆತ ಪ್ರಧಾನಿ ಆಗಿರುವ ಕಾಲಕ್ಕೆ ನಾನು ಬದುಕಿರಲು ಇಷ್ಟಪಡುವುದಿಲ್ಲ’ ಎಂದು ಹಿರಿಯ ಸಾಹಿತಿ ಯು.ಆರ್. ಅನಂತಮೂರ್ತಿ ಅತ್ಯಂತ ಖಾರವಾಗಿ ಹೇಳಿದರು.<br /> <br /> ಭಾನುವಾರ ನಗರದಲ್ಲಿ ಏರ್ಪಡಿಸಿದ್ದ ಪ್ರೊ.ಬರಗೂರು ರಾಮಚಂದ್ರಪ್ಪ ಅವರ ‘ಅನುಸಂಧಾನ’ ಮತ್ತು ‘ದೇವರ ಗುಟ್ಟು’ ಕೃತಿಗಳ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು. <br /> <br /> ‘ಮೋದಿ ಪರ ಅಲೆ ಎನ್ನುವುದು ಕೇವಲ ಮಾಧ್ಯಮದ ಸೃಷ್ಟಿ’ ಎಂದು ಲೇವಡಿ ಮಾಡಿದರು.<br /> <br /> ‘ಕೋಮು ವಾದಿಗಳು, ಮುಖವಾಡ ಧರಿಸಿದವರು ಈ ದೇಶದ ಪ್ರಧಾನಿ ಆಗುವುದು ಬೇಕಿಲ್ಲ. ಆದ್ದರಿಂದಲೇ ಸಮಾಜವಾದಿ ಸಿದ್ಧಾಂತದ ಹಿನ್ನೆಲೆ ಹೊಂದಿರುವ ನಾನು ಒಂದು ಕಾಲಕ್ಕೆ ತೀವ್ರವಾಗಿ ವಿರೋಧಿಸಿದ್ದ ಕಾಂಗ್ರೆಸ್ ಬೆಂಬಲಕ್ಕೆ ನಿಂತಿದ್ದೇನೆ’ ಎಂದು ತಿಳಿಸಿದರು.<br /> <br /> ‘ಮೋದಿ ವಿರುದ್ಧ ಎಲ್ಲ ಜಾತ್ಯತೀತ ಶಕ್ತಿಗಳು ಒಗ್ಗೂಡಬೇಕು. ರಾಜ್ಯದಲ್ಲಿ ಎಸ್.ಎಂ. ಕೃಷ್ಣ ಅಂತಹ ಆಂದೋಲನದ ನೇತೃತ್ವ ವಹಿಸಿಕೊಳ್ಳಬೇಕು. ಕೋಮುವಾದದ ಎದುರು ಯುವಶಕ್ತಿಯನ್ನು ಕಟ್ಟಿ ನಿಲ್ಲಿಸಬೇಕು’ ಎಂದು ಹೇಳಿದರು.<br /> <br /> ‘ಮೋದಿ ಪ್ರಧಾನಿಯಾಗದಂತೆ ತಡೆಯುವ ಯತ್ನಗಳು ನಡೆಯಬೇಕು’ ಎಂದು ಅವರು ಪ್ರತಿಪಾದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ನರೇಂದ್ರ ಮೋದಿ ಅವರನ್ನು ಪ್ರಧಾಶನಿ ಅಭ್ಯರ್ಥಿಯನ್ನಾಗಿ ಬಿಜೆಪಿ ಘೋಷಿಸಿದೆ. ಆತ ಪ್ರಧಾನಿ ಆಗಿರುವ ಕಾಲಕ್ಕೆ ನಾನು ಬದುಕಿರಲು ಇಷ್ಟಪಡುವುದಿಲ್ಲ’ ಎಂದು ಹಿರಿಯ ಸಾಹಿತಿ ಯು.ಆರ್. ಅನಂತಮೂರ್ತಿ ಅತ್ಯಂತ ಖಾರವಾಗಿ ಹೇಳಿದರು.<br /> <br /> ಭಾನುವಾರ ನಗರದಲ್ಲಿ ಏರ್ಪಡಿಸಿದ್ದ ಪ್ರೊ.ಬರಗೂರು ರಾಮಚಂದ್ರಪ್ಪ ಅವರ ‘ಅನುಸಂಧಾನ’ ಮತ್ತು ‘ದೇವರ ಗುಟ್ಟು’ ಕೃತಿಗಳ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು. <br /> <br /> ‘ಮೋದಿ ಪರ ಅಲೆ ಎನ್ನುವುದು ಕೇವಲ ಮಾಧ್ಯಮದ ಸೃಷ್ಟಿ’ ಎಂದು ಲೇವಡಿ ಮಾಡಿದರು.<br /> <br /> ‘ಕೋಮು ವಾದಿಗಳು, ಮುಖವಾಡ ಧರಿಸಿದವರು ಈ ದೇಶದ ಪ್ರಧಾನಿ ಆಗುವುದು ಬೇಕಿಲ್ಲ. ಆದ್ದರಿಂದಲೇ ಸಮಾಜವಾದಿ ಸಿದ್ಧಾಂತದ ಹಿನ್ನೆಲೆ ಹೊಂದಿರುವ ನಾನು ಒಂದು ಕಾಲಕ್ಕೆ ತೀವ್ರವಾಗಿ ವಿರೋಧಿಸಿದ್ದ ಕಾಂಗ್ರೆಸ್ ಬೆಂಬಲಕ್ಕೆ ನಿಂತಿದ್ದೇನೆ’ ಎಂದು ತಿಳಿಸಿದರು.<br /> <br /> ‘ಮೋದಿ ವಿರುದ್ಧ ಎಲ್ಲ ಜಾತ್ಯತೀತ ಶಕ್ತಿಗಳು ಒಗ್ಗೂಡಬೇಕು. ರಾಜ್ಯದಲ್ಲಿ ಎಸ್.ಎಂ. ಕೃಷ್ಣ ಅಂತಹ ಆಂದೋಲನದ ನೇತೃತ್ವ ವಹಿಸಿಕೊಳ್ಳಬೇಕು. ಕೋಮುವಾದದ ಎದುರು ಯುವಶಕ್ತಿಯನ್ನು ಕಟ್ಟಿ ನಿಲ್ಲಿಸಬೇಕು’ ಎಂದು ಹೇಳಿದರು.<br /> <br /> ‘ಮೋದಿ ಪ್ರಧಾನಿಯಾಗದಂತೆ ತಡೆಯುವ ಯತ್ನಗಳು ನಡೆಯಬೇಕು’ ಎಂದು ಅವರು ಪ್ರತಿಪಾದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>