ಜೂನ್ 12ರ ಒಳಗೆ ಮೀನುಗಾರರ ಬಿಡುಗಡೆಗೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುವುದಾಗಿ ಮೀನುಗಾರರ ಒಕ್ಕೂಟ ಎಚ್ಚರಿಕೆ ನೀಡಿದೆ.
ಕಚತಿವು ಎಂಬಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ವಶಕ್ಕೆ ಪಡೆದಿದೆ. ಆದರೆ, ಇವರು ಯಾರೂ ಅಂತರರಾಷ್ಟ್ರೀಯ ಜಲಗಡಿ ಉಲ್ಲಂಘಿಸಿಲ್ಲ ಎಂದು ಮೀನುಗಾರಿಕೆ ಒಕ್ಕೂಟದ ಅಧ್ಯಕ್ಷ ಎಸ್. ಇಮ್ರಿತ್ ಸುದ್ದಿಗಾರರಿಗೆ ತಿಳಿಸಿದರು.
ಮೀನುಗಾರರ ಬಿಡುಗಡೆಗೆ ಸಂಬಂಧಿಸಿದಂತೆ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಮೋದಿ ಅವರ ಮನವೊಲಿಕೆಗೆ ಮುಂದಾಗಬೇಕು ಎಂದು ಸಂಘಟನೆಯ ಸದಸ್ಯರು ಆಗ್ರಹಿಸಿದರು.