ನವದೆಹಲಿ: ವಾರಾಣಸಿಯ ಬನಾರಸ್ ಹಿಂದು ವಿಶ್ವವಿದ್ಯಾಲಯದ ಆವರಣದಲ್ಲಿ ಕಾಲಿಡಲು ನರೇಂದ್ರ ಮೋದಿ ಅವರಿಗೆ ಅವಕಾಶ ನೀಡಬಾರದು ಎಂದು ಆಗ್ರಹಿಸಿ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಿದೆ.
ಬನಾರಸ್ ವಿವಿಗೆ ಹೆಲಿಕಾಪ್ಟರ್ನಲ್ಲಿ ತೆರಳಿ ವಿವಿ ಸಂಸ್ಥಾಪಕ ಮದನ್ ಮೋಹನ್ ಮಾಳವೀಯ ಅವರ ಪ್ರತಿಮೆಗೆ ಮೋದಿ ಹಾರ ಹಾಕುವ ಕಾರ್ಯಕ್ರಮವಿದೆ. ಅದೇ ರೀತಿ ಮಹಾತ್ಮಾ ಗಾಂಧಿ ಕಾಶಿ ವಿದ್ಯಾಪೀಠದ ಆವರಣದಲ್ಲಿ ಅವರು ರೋಡ್ ಷೋ ನಡೆಸಲಿದ್ದಾರೆ.
ಬನಾರಸ್ ವಿವಿ ಮತ್ತು ಮಹಾತ್ಮಾ ಗಾಂಧಿ ಕಾಶಿ ವಿದ್ಯಾಪೀಠಗಳು ಕ್ರಮವಾಗಿ ಕೇಂದ್ರೀಯ ಹಾಗೂ ರಾಜ್ಯ ವಿಶ್ವವಿದ್ಯಾಲಯಗಳು. ಹಾಗಾಗಿ, ರಾಜಕೀಯ ಉದ್ದೇಶಕ್ಕಾಗಿ ಈ ವಿವಿಗಳ ಆವರಣ ಬಳಸಿಕೊಳ್ಳುವಂತಿಲ್ಲ ಎಂದು ಕಾಂಗ್ರೆಸ್ ಅರ್ಜಿಯಲ್ಲಿ ಹೇಳಿದೆ.