ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ವಿರೋಧಿಗಳಿಗೆ ಭಾರತದಲ್ಲಿ ಜಾಗವಿಲ್ಲ: ಸಿಂಗ್ ಹೇಳಿಕೆಗೆ ತೀವ್ರ ವಿರೋಧ

Last Updated 20 ಏಪ್ರಿಲ್ 2014, 11:10 IST
ಅಕ್ಷರ ಗಾತ್ರ

ಪಟ್ನಾ (ಪಿಟಿಐ); ಬಿಹಾರದ ಬಿಜೆಪಿ ನಾಯಕ ಗಿರಿರಾಜ್‌ ಸಿಂಗ್‌ ಅವರ ವಿವಾದಾತ್ಮಕ ಹೇಳಿಕೆ ಸರ್ಮಥನಿಯವಲ್ಲ ಎಂದು ಬಿಜೆಪಿಯ ಹಿರಿಯ ನಾಯಕ ರಾಜ್‌ನಾಥ್‌ ಸಿಂಗ್‌ ಭಾನುವಾರ ಕಿಡಿಕಾರಿದ್ದಾರೆ.

ಪಕ್ಷದ ಹಿತಾಸಕ್ತಿಗೆ ಮುಜುಗರ ಉಂಟಾಗುವಂತಹ ಹೇಳಿಕೆಗಳನ್ನು ಮುಖಂಡರು ನೀಡಬಾರದು ಎಂದು  ಎಚ್ಚರಿಸಿದ್ದಾರೆ.
ಭಾರತ ಜಾತ್ಯತೀತ ದೇಶವಾಗಿದ್ದು ನಾವು ಎಲ್ಲರ ಹಕ್ಕು ಮತ್ತು ಸ್ವಾತಂತ್ರ್ಯವನ್ನು ಗೌರವಿಸಬೇಕು. ಗಿರಿರಾಜ್‌ ಸಿಂಗ್‌ ಹೇಳಿಕೆ ಸಮರ್ಥನಿಯವಲ್ಲ ಎಂದು ರಾಜ್‌ನಾಥ್‌ ಸಿಂಗ್‌ ತಿಳಿಸಿದ್ದಾರೆ.

ಬಿಹಾರ ಬಿಜೆಪಿಯ ಮುಖ್ಯಸ್ಥ ಸುಶೀಲ್‌ ಕುಮಾರ್‌ ಮೋದಿ ಗಿರಿರಾಜ್‌ ಸಿಂಗ್‌ ಹೇಳಿಕೆ ಬೇಜವಾಬ್ದಾರಿಯಿಂದ ಕೂಡಿದೆ ಎಂದು ಟ್ವಿಟ್‌ ಮಾಡಿದ್ದಾರೆ. ಇದನ್ನು ಬಿಜೆಪಿ ಒಪ್ಪುವುದಿಲ್ಲ ಎಂದು ಸುಶೀಲ್‌ ಕುಮಾರ್‌ ಮೋದಿ ತಿಳಿಸಿದ್ದಾರೆ.

ಗಿರಿರಾಜ್‌ ಸಿಂಗ್‌ ಹೇಳಿಕೆಯನ್ನು ಕಾಂಗ್ರೆಸ್‌ ಪಕ್ಷ ತೀವ್ರವಾಗಿ ಖಂಡಿಸಿದ್ದು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ನಿನ್ನೆ ಚುನಾವಣಾ ಸಭೆಯಲ್ಲಿ ಗಿರಿರಾಜ್‌ ಸಿಂಗ್‌ ’ನರೇಂದ್ರ ಮೋದಿ ಪ್ರಧಾನಿಯಾಗುವುದು ಯಾರಿಗೆ ಇಷ್ಟವಿಲ್ಲವೊ ಅವರೆಲ್ಲ ಚುನಾವಣಾ ಬಳಿಕ ಪಾಕಿಸ್ತಾನಕ್ಕೆ ತೆರಳಲಿ ಎಂಬ ಹೇಳಿಕೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT