‘ಭೂಕಂಪ ಸಂಭವಿಸಿ ಒಂಬತ್ತು ದಿನಗಳು ಕಳೆದಿದ್ದು, ಎಲ್ಲಾ 34 ರಾಷ್ಟ್ರಗಳ ರಕ್ಷಣಾ ತಂಡಗಳನ್ನು ಹಿಂದಕ್ಕೆ ಕರೆಯಿಸಿಕೊಳ್ಳುವಂತೆ ಕೋರಲಾಗಿದೆ’ ಎಂದು ವಿದೇಶಾಂಗ ಇಲಾಖೆ ವಕ್ತಾರ ವಿಕಾಸ್ ಸ್ವರೂಪ್ ತಿಳಿಸಿದ್ದಾರೆ.
ರಕ್ಷಣಾ ಕಾರ್ಯಾಚರಣೆ ಮುಗಿದಿದ್ದು, ಪರಿಹಾರ ಹಾಗೂ ಪುನರ್ವಸತಿ ಒದಗಿಸುವ ಕಾರ್ಯಾಚರಣೆ ಮುಂದುವರಿಯಲಿದೆ ಎಂದೂ ಅವರು ತಿಳಿಸಿದ್ದಾರೆ.