ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ಅಗಲೀಕರಣಗೊಳಿಸಿ

Last Updated 2 ಮೇ 2016, 19:54 IST
ಅಕ್ಷರ ಗಾತ್ರ

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯವರು ಮುಖ್ಯಮಂತ್ರಿ ನಗರೋತ್ಥಾನ ಯೋಜನೆ ಅಡಿ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕಾಗಿ ರಾಜರಾಜೇಶ್ವರಿನಗರ ವಲಯದ ಲಗ್ಗೆರೆ ವಾರ್ಡ್‌ನಲ್ಲಿ 42 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಕೈಗೊಂಡಿರುವುದಕ್ಕೆ ಧನ್ಯವಾದಗಳು.

ದುರಾದೃಷ್ಟದ ಸಂಗತಿಯೆಂದರೆ, ಲಗ್ಗೆರೆಯ ವಾರ್ಡ್‌ ನಂ. 69ರ ಡಾ. ವಿಷ್ಣುವರ್ಧನ್‌ ಮುಖ್ಯ ರಸ್ತೆಯು 300 ಅಡಿಗಳಷ್ಟು ಉದ್ದವಿದ್ದು, ತುಂಬಾ ಕಿರಿದಾಗಿದೆ. ಇದರಿಂದಾಗಿ ಈ ರಸ್ತೆಯಲ್ಲಿ ಲಘು ಮತ್ತು ಭಾರಿ ವಾಹನಗಳು ಸಂಚಾರಕ್ಕೆ ತುಂಬ ತೊಂದರೆಯಾಗಿದೆ.

ಹಾಗೆಯೇ, ಬಿಎಂಟಿಸಿ ಬಸ್ಸುಗಳು ಲಗ್ಗೆರೆಯ ನೂತನ ಬಸ್ಸು ನಿಲ್ದಾಣಕ್ಕೆ ಬಂದು ಹೋಗಲು ತೊಂದರೆಯಾಗಿದೆ. ಈ ಕುರಿತಂತೆ ಜನಪ್ರತಿನಿಧಿಗಳಿಗೆ ಕಳೆದ 12 ವರ್ಷಗಳಿಂದ ಮನವಿಗಳನ್ನು ಸಲ್ಲಿಸುತ್ತಾ ಬಂದರೂ ಈ ತನಕ ಯಾವುದೇ ಕಾಮಗಾರಿ ಕೈಗೊಂಡಿರುವುದಿಲ್ಲ.

ಈಗಲಾದರೂ ಸಂಬಂಧಪಟ್ಟವರು ಸೂಕ್ತ ಕ್ರಮ ಕೈಗೊಂಡು ಕಿರಿದಾಗಿರುವ ಡಾ. ವಿಷ್ಣುವರ್ಧನ್‌ ಮುಖ್ಯ ರಸ್ತೆಯನ್ನು ಅಗಲೀಕರಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುತ್ತಾರೆಂದು ಆಶಿಸೋಣವೇ?
– ಜಿ. ಸಿದ್ದಗಂಗಯ್ಯ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT