ಮುಖ್ಯ ನ್ಯಾಯಮೂರ್ತಿ ಪಿ.ಸದಾಶಿವಂ, ನ್ಯಾಯಮೂರ್ತಿಗಳಾದ ರಂಜನ್ ಗೊಗೋಯ್ ಮತ್ತು ಎನ್.ವಿ.ರಮಣ ಅವರ ಪೀಠ ಮಂಗಳವಾರ ಈ ಕ್ರಮ ಕೈಗೊಂಡಿದೆ. ನಿಯಮಾವಳಿಗಳ ಜಾರಿ, ಎಂಜಿನಿಯರಿಂಗ್, ಶಿಕ್ಷಣ ಮತ್ತು ತುರ್ತು ಚಿಕಿತ್ಸಾ ವ್ಯವಸ್ಥೆ– ಈ ನಾಲ್ಕು ಆಯಾಮಗಳನ್ನು ಆಧರಿಸಿ ರಾಷ್ಟ್ರದ ರಸ್ತೆಗಳಲ್ಲಿ ಸುರಕ್ಷತೆ ಹೆಚ್ಚಿಸುವ ತುರ್ತು ಅಗತ್ಯವಿದೆ ಎಂದು ಪೀಠ ಅಭಿಪ್ರಾಯಪಟ್ಟಿತು.