ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಘವೇಶ್ವರರಿಗೆ ನಿರ್ಬಂಧ ಹೇರಲು ಹೈಕೋರ್ಟ್‌ಗೆ ಅರ್ಜಿ

Last Updated 28 ಏಪ್ರಿಲ್ 2016, 19:30 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಶ್ರೀಗಳು ರಾಮಕಥಾ ಗಾಯಕಿ  ಜೊತೆ 169 ಬಾರಿ ದೇಹ ಸಂಬಂಧ ಬೆಳೆಸುವ ಮೂಲಕ   4 ವರ್ಷ ಲೈಂಗಿಕ ಸುಖ ಪಡೆದಿದ್ದಾರೆ. ಇದು ಸನ್ಯಾಸಾಶ್ರಮಕ್ಕೆ ವಿರುದ್ಧವಾದ ನಡೆ. ಆದ್ದರಿಂದ ಶ್ರೀಗಳು ಮಠದ ಕಾರ್ಯಭಾರ ನಿರ್ವಹಿಸದಂತೆ ತಡೆ ನೀಡಬೇಕು’ ಎಂದು ಕೋರಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ಈ  ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎಸ್‌.ಕೆ.ಮುಖರ್ಜಿ ಹಾಗೂ ನ್ಯಾಯಮೂರ್ತಿ ರವಿ ಮಳಿಮಠ  ಅವರಿದ್ದ ವಿಭಾಗೀಯ ಪೀಠವು  ಗುರುವಾರ ಅಂಗೀಕರಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನೋಟಿಸ್‌ ಜಾರಿ ಮಾಡಲು ಆದೇಶಿಸಿತು. ಎದುರ್ಕಳ ಈಶ್ವರ ಭಟ್ಟ ಹಾಗೂ ಇತರ ಐವರು ಈ ಅರ್ಜಿ ಸಲ್ಲಿಸಿದ್ದಾರೆ.

‘ಶ್ರೀಮಠದ ವ್ಯವಹಾರಗಳಲ್ಲಿ ತೆರಿಗೆ ವಂಚನೆ ಸೇರಿದಂತೆ  ಅನೇಕ ಅಕ್ರಮಗಳು ಜರುಗಿವೆ. ಈ ಎಲ್ಲಾ ಕಾರಣಕ್ಕಾಗಿ ನಿಷ್ಠಾವಂತ ಭಕ್ತರು, ಸರ್ಕಾರದ ಅಧಿಕಾರಿಗಳು, ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಅಥವಾ ಇದೇ ಹೈಕೋರ್ಟ್‌ ಸೂಚಿಸುವವರು ಶ್ರೀಮಠದ ಆಡಳಿತವನ್ನು ನಿರ್ವಹಣೆ ಮಾಡುವಂತೆ ನ್ಯಾಯಪೀಠವು ಸೂಕ್ತ ನಿರ್ದೇಶನ ನೀಡಬೇಕು’ ಎಂದು ಕೋರಲಾಗಿದೆ.

ತುರ್ತು ನೋಟಿಸ್‌  ಜಾರಿಗೆ  ಆದೇಶ
ಬೆಂಗಳೂರು:
ರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು ಅತ್ಯಾಚಾರ ಆರೋಪದಿಂದ  ಕೈಬಿಟ್ಟ ಅಧೀನ ನ್ಯಾಯಾಲಯದ  ಆದೇಶ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಿಸಿದಂತೆ  ಶ್ರೀಗಳಿಗೆ ತುರ್ತು ನೋಟಿಸ್‌ ಜಾರಿ ಮಾಡಲು ಹೈಕೋರ್ಟ್‌ ಆದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT