ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಂಪೇಟ್‌: ಪುರಂದೇಶ್ವರಿ ನಾಮಪತ್ರ

Last Updated 19 ಏಪ್ರಿಲ್ 2014, 19:30 IST
ಅಕ್ಷರ ಗಾತ್ರ

ಹೈದರಾಬಾದ್‌ (ಐಎಎನ್‌ಎಸ್‌): ಕೇಂದ್ರದ ಮಾಜಿ ಸಚಿವೆ ಡಿ. ಪುರಂದೇಶ್ವರಿ, ಆಂಧ್ರಪ್ರದೇಶದ ಮಾಜಿ ಕಾಂಗ್ರೆಸ್‌ ಅಧ್ಯಕ್ಷ ಬೋತ್ಸ ಸತ್ಯನಾರಾಯಣ ಸೇರಿದಂತೆ ಹಲವು ಪ್ರಮುಖರು ಆಂಧ್ರ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಾಗಿ ಶನಿವಾರ ನಾಮಪತ್ರ ಸಲ್ಲಿಸಿದರು.

ಇತ್ತೀಚೆಗಷ್ಟೇ ಕಾಂಗ್ರೆಸ್‌ ತೊರೆದಿದ್ದ ಪುರಂದೇಶ್ವರಿ ಅವರು ರಾಜಂಪೇಟ್‌ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ­ಯಾಗಿ ನಾಮಪತ್ರ ಸಲ್ಲಿಸಿದರು.

2009ರ ಚುನಾವಣೆಯಲ್ಲಿ ಅವರು ವಿಶಾಖಪಟ್ಟಣ ಕ್ಷೇತ್ರದಿಂದ ಆಯ್ಕೆ­ಯಾಗಿದ್ದರು. ತೆಲುಗು ದೇಶಂ ಪಕ್ಷದ ಸಂಸ್ಥಾಪಕ ಎನ್‌.ಟಿ ರಾಮ ರಾವ್‌ ಅವರ ಪುತ್ರಿಯಾಗಿರುವ ಪುರಂದೇಶ್ವರಿ  2004ರ ಚುನಾವಣೆಗೂ  ಮುನ್ನ ಕಾಂಗ್ರೆಸ್‌ ಸೇರಿ ಬಾಪಟ್ಳ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು.
ಸೀಮಾಂಧ್ರ ಭಾಗದಲ್ಲಿ ನಡೆಯ­ಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಶನಿವಾರ ಕಡೆಯ ದಿನವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT