<p>ನವದೆಹಲಿ / ಹೈದರಾಬಾದ್ (ಐಎಎನ್ಎಸ್): ಆಂಧ್ರಪ್ರದೇಶ ವಿಭಜನೆಯನ್ನು ವಿರೋಧಿಸಿ ಮುಖ್ಯಮಂತ್ರಿ ಎನ್. ಕಿರಣ್ ಕುಮಾರ್ ರೆಡ್ಡಿ ಅವರು ತಮ್ಮ ಸಂಪುಟದ ಕೆಲವು ಸಹೋದ್ಯೋಗಿಗಳ ಜೊತೆಗೆ ರಾಷ್ಟ್ರದ ರಾಜಧಾನಿಯಲ್ಲಿ ಬುಧವಾರ 'ಮೌನ ಪ್ರತಿಭಟನೆ' ನಡೆಸಿದರು.<br /> <br /> ಸೀಮಾಂಧ್ರ ಪ್ರದೇಶದ (ರಾಯಲಸೀಮಾ ಮತ್ತು ಕರಾವಳಿ ಆಂಧ್ರ ಪ್ರದೇಶ) ಕೇಂದ್ರ ಸಚಿವರು, ಕಾಂಗ್ರೆಸ್ ಸಂಸದರು ಮತ್ತು ರಾಜ್ಯ ಸಚಿವರು ಹಾಗೂ ಶಾಸಕರು ಪ್ರತಿಭಟನೆಯಲ್ಲಿ ಮುಖ್ಯಮಂತ್ರಿಯ ಜೊತೆಗೂಡಿ ತೆಲಂಗಾಣ ರಾಜ್ಯ ರಚನೆ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಬಾರದು ಎಂದು ಆಗ್ರಹಿಸಿದರು.<br /> <br /> ಕಾಂಗ್ರೆಸ್ ವರಿಷ್ಠ ಮಂಡಳಿಯನ್ನು ಧಿಕ್ಕರಿಸಿದ ಮುಖ್ಯಮಂತ್ರಿ ಮತ್ತು ಅವರ ಬೆಂಬಲಿಗರು ರಾಜ್ಯ ವಿಧಾನಸಭೆಯ ಉಭಯ ಸದನಗಳು ತಿರಸ್ಕರಿಸಿದ ಆಂಧ್ರ ಪ್ರದೇಶ ಪುನರ್ ವಿಂಗಡಣಾ ಮಸೂದೆ -2013 ನ್ನು ಸಂಸತ್ತಿನಲ್ಲಿ ಮಂಡಿಸಬಾರದು ಎಂದು ಆಗ್ರಹಿಸಿ ಜಂತರ ಮಂತರ್ ನಲ್ಲಿ ಇಡೀ ದಿನ ಧರಣಿ ಕುಳಿತರು.<br /> <br /> ಕೇಂದ್ರ ಸಚಿವರಾದ ಕೆ.ಎಸ್. ರಾವ್, ಪಲ್ಲಂ ರಾಜು, ಕೆ. ಚಿರಂಜೀವಿ ಮತ್ತು ಡಿ. ಪುರಂದೇಶ್ವರಿ, ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಬೋತ್ಸಾ ಸತ್ಯನಾರಾಯಣ ಹಾಗೂ ಭಾರಿ ಸಂಖ್ಯೆಯಲ್ಲಿ ಸೀಮಾಂಧ್ರದ ಪಕ್ಷ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.<br /> <br /> ಪ್ರತಿಭಟನಕಾರರು ಸಂಯುಕ್ತ ಆಂಧ್ರ ಪರ ಘೋಷಣೆಗಳನ್ನು ಕೂಗಿದರು. ಯಮುನಾ ನದಿ ದಂಡೆಯಲ್ಲಿರು ಮಹಾತ್ಮ ಗಾಂಧಿಯವರ ಸಮಾಧಿ ಸ್ಥಳ ರಾಜಘಾಟ್ ನಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಮುಖ್ಯಮಂತ್ರಿ ಜಂತರ್ ಮಂತರ್ ಪ್ರದೇಶಕ್ಕೆ ಬಂದರು.<br /> <br /> ಮುಖ್ಯಮಂತ್ರಿ ಮತ್ತು ಬೆಂಬಲಿಗರು ಆಂಧ್ರ ಪ್ರದೇಶ ಭವನದಿಂದ ಜಂತರ್ ಮಂತರ್ ಗೆ ಹೊರಟಾಗ ಭವನದಲ್ಲಿ ತೆಲಂಗಾಣ ಪ್ರದೇಶದ ಮಂತ್ರಿಗಳು ಸೇರಿದಂತೆ ತೆಲಂಗಾಣ ಬೆಂಬಲಿಗರು ತಡೆಯಲು ಯತ್ನಿಸಿದ್ದರಿಂದ ಪ್ರಕ್ಷುಬ್ಧ ಸ್ಥಿತಿ ನಿರ್ಮಾಣಗೊಂಡಿತು.<br /> <br /> ಮುಷ್ಠಿ ಬಿಗಿ ಹಿಡಿದು ಜೋರಾಗಿ ಘೋಷಣೆ ಕೂಗುತ್ತಾ ಮುಖ್ಯಮಂತ್ರಿ ಗದ್ದಲದ ಮಧ್ಯೆಯೇ ಬಸ್ಸೇರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ / ಹೈದರಾಬಾದ್ (ಐಎಎನ್ಎಸ್): ಆಂಧ್ರಪ್ರದೇಶ ವಿಭಜನೆಯನ್ನು ವಿರೋಧಿಸಿ ಮುಖ್ಯಮಂತ್ರಿ ಎನ್. ಕಿರಣ್ ಕುಮಾರ್ ರೆಡ್ಡಿ ಅವರು ತಮ್ಮ ಸಂಪುಟದ ಕೆಲವು ಸಹೋದ್ಯೋಗಿಗಳ ಜೊತೆಗೆ ರಾಷ್ಟ್ರದ ರಾಜಧಾನಿಯಲ್ಲಿ ಬುಧವಾರ 'ಮೌನ ಪ್ರತಿಭಟನೆ' ನಡೆಸಿದರು.<br /> <br /> ಸೀಮಾಂಧ್ರ ಪ್ರದೇಶದ (ರಾಯಲಸೀಮಾ ಮತ್ತು ಕರಾವಳಿ ಆಂಧ್ರ ಪ್ರದೇಶ) ಕೇಂದ್ರ ಸಚಿವರು, ಕಾಂಗ್ರೆಸ್ ಸಂಸದರು ಮತ್ತು ರಾಜ್ಯ ಸಚಿವರು ಹಾಗೂ ಶಾಸಕರು ಪ್ರತಿಭಟನೆಯಲ್ಲಿ ಮುಖ್ಯಮಂತ್ರಿಯ ಜೊತೆಗೂಡಿ ತೆಲಂಗಾಣ ರಾಜ್ಯ ರಚನೆ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಬಾರದು ಎಂದು ಆಗ್ರಹಿಸಿದರು.<br /> <br /> ಕಾಂಗ್ರೆಸ್ ವರಿಷ್ಠ ಮಂಡಳಿಯನ್ನು ಧಿಕ್ಕರಿಸಿದ ಮುಖ್ಯಮಂತ್ರಿ ಮತ್ತು ಅವರ ಬೆಂಬಲಿಗರು ರಾಜ್ಯ ವಿಧಾನಸಭೆಯ ಉಭಯ ಸದನಗಳು ತಿರಸ್ಕರಿಸಿದ ಆಂಧ್ರ ಪ್ರದೇಶ ಪುನರ್ ವಿಂಗಡಣಾ ಮಸೂದೆ -2013 ನ್ನು ಸಂಸತ್ತಿನಲ್ಲಿ ಮಂಡಿಸಬಾರದು ಎಂದು ಆಗ್ರಹಿಸಿ ಜಂತರ ಮಂತರ್ ನಲ್ಲಿ ಇಡೀ ದಿನ ಧರಣಿ ಕುಳಿತರು.<br /> <br /> ಕೇಂದ್ರ ಸಚಿವರಾದ ಕೆ.ಎಸ್. ರಾವ್, ಪಲ್ಲಂ ರಾಜು, ಕೆ. ಚಿರಂಜೀವಿ ಮತ್ತು ಡಿ. ಪುರಂದೇಶ್ವರಿ, ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಬೋತ್ಸಾ ಸತ್ಯನಾರಾಯಣ ಹಾಗೂ ಭಾರಿ ಸಂಖ್ಯೆಯಲ್ಲಿ ಸೀಮಾಂಧ್ರದ ಪಕ್ಷ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.<br /> <br /> ಪ್ರತಿಭಟನಕಾರರು ಸಂಯುಕ್ತ ಆಂಧ್ರ ಪರ ಘೋಷಣೆಗಳನ್ನು ಕೂಗಿದರು. ಯಮುನಾ ನದಿ ದಂಡೆಯಲ್ಲಿರು ಮಹಾತ್ಮ ಗಾಂಧಿಯವರ ಸಮಾಧಿ ಸ್ಥಳ ರಾಜಘಾಟ್ ನಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಮುಖ್ಯಮಂತ್ರಿ ಜಂತರ್ ಮಂತರ್ ಪ್ರದೇಶಕ್ಕೆ ಬಂದರು.<br /> <br /> ಮುಖ್ಯಮಂತ್ರಿ ಮತ್ತು ಬೆಂಬಲಿಗರು ಆಂಧ್ರ ಪ್ರದೇಶ ಭವನದಿಂದ ಜಂತರ್ ಮಂತರ್ ಗೆ ಹೊರಟಾಗ ಭವನದಲ್ಲಿ ತೆಲಂಗಾಣ ಪ್ರದೇಶದ ಮಂತ್ರಿಗಳು ಸೇರಿದಂತೆ ತೆಲಂಗಾಣ ಬೆಂಬಲಿಗರು ತಡೆಯಲು ಯತ್ನಿಸಿದ್ದರಿಂದ ಪ್ರಕ್ಷುಬ್ಧ ಸ್ಥಿತಿ ನಿರ್ಮಾಣಗೊಂಡಿತು.<br /> <br /> ಮುಷ್ಠಿ ಬಿಗಿ ಹಿಡಿದು ಜೋರಾಗಿ ಘೋಷಣೆ ಕೂಗುತ್ತಾ ಮುಖ್ಯಮಂತ್ರಿ ಗದ್ದಲದ ಮಧ್ಯೆಯೇ ಬಸ್ಸೇರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>