ಬೆಂಗಳೂರು: ಮಹದಾಯಿ ಮಧ್ಯಂತರ ತೀರ್ಪು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯರು ರಾಜಭವನ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಕಾರ್ಯಕರ್ತರು ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಾಗ ಮಹಿಳಾ ಪೊಲೀಸರು ಅದನ್ನು ತಡೆದಿದ್ದಾರೆ.
ಈ ವೇಳೆ ನಡುರಸ್ತೆಯಲ್ಲೇ ಕರವೇ ಮಹಿಳಾ ಕಾರ್ಯಕರ್ತರು ಮತ್ತು ಮಹಿಳಾ ಪೊಲೀಸರ ನಡುವೆ ಜಟಾಪಟಿ ನಡೆದಿದೆ.
ಈ ವೇಳೆ ಸುಮಾರು 25 ಮಂದಿ ಕರವೇ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.