ಬೆಂಗಳೂರು: ರಾಜ್ಯದ ಸಮಸ್ಯೆಗಳಿಗೆ ನೆರವು ನೀಡಲು ಕೇಂದ್ರ ಸರ್ಕಾರ ಸಿದ್ಧವಿದೆ. ಆದರೆ, ರಾಜ್ಯ ಸರ್ಕಾರ ಯಾವ ಸ್ವರೂಪದ ನೆರವು ನಿರೀಕ್ಷಿಸುತ್ತಿದೆ ಎಂಬುದನ್ನು ಸ್ಪಷ್ಟಪಡಿ ಸಬೇಕು ಎಂದು ರೈಲ್ವೆ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದರು.
ಶುಕ್ರವಾರ ಪುರಭವನದ ಬಳಿ ಆಯೋಜಿಸಿದ್ದ ‘ರಾಷ್ಟ್ರೀಯ ಏಕತಾ ಓಟ’ದಲ್ಲಿ ಅಖಂಡತೆ ಮತ್ತು ಸಮಗ್ರತೆಯ ಪ್ರತಿಜ್ಞಾವಿಧಿ ಬೋಧಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದರು. ಗೃಹ ಸಚಿವ ಕೆ.ಜೆ. ಜಾರ್ಜ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಜಾರ್ಜ್ ಅವರು ಹೇಳಿಕೆ ನೀಡುವ ಮುನ್ನ ಯೋಚಿಸಬೇಕಿತ್ತು. ಹೀಗಾಗಿ ಅವರ ಹೇಳಿಕೆಗೆ ಪ್ರತಿಕ್ರಿಯಿಸುವುದಿಲ್ಲ’ ಎಂದರು.
ಲೋಕೋಪಯೋಗಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಏಕತೆ ಗಾಗಿ ಓಟಕ್ಕೆ ಚಾಲನೆ ನೀಡಿದರು. ಕ್ರೀಡಾಪಟು ಅಶ್ವಿನಿ ನಾಚಪ್ಪ, ಸಂಸದ ಪಿ.ಸಿ. ಮೋಹನ್, ಶಾಸಕರಾದ ಎಸ್. ಸುರೇಶ್ಕುಮಾರ್, ವಿಜಯ ಕುಮಾರ್ ಪಾಲ್ಗೊಂಡಿದ್ದರು.