ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಸಭೆಗೆ ನಿರ್ಮಲಾ ಅವಿರೋಧ ಆಯ್ಕೆ

Last Updated 24 ಜೂನ್ 2014, 19:30 IST
ಅಕ್ಷರ ಗಾತ್ರ

ಹೈದರಾಬಾದ್‌(ಐಎಎನ್‌ಎಸ್‌): ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕಾ ಖಾತೆ ರಾಜ್ಯ ಸಚಿವೆ ನಿರ್ಮಲಾ ಸೀತಾ­ರಾಮನ್‌ ಅವರು ಆಂಧ್ರ­ಪ್ರದೇಶದಿಂದ ರಾಜ್ಯಸಭೆಗೆ ಮಂಗಳವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಾಮಪತ್ರ ಸಲ್ಲಿಸಲು ಸೋಮವಾರ ಕೊನೆಯ ದಿನ­ವಾಗಿದ್ದು, ನಿರ್ಮಲಾ ಅವರನ್ನು ಹೊರತುಪಡಿಸಿ ಯಾರೂ ನಾಮಪತ್ರ ಸಲ್ಲಿಸದ ಕಾರಣ ಅವರು ಅವಿರೋಧವಾಗಿ ಆಯ್ಕೆಯಾಗಿರುವ ಕುರಿತು ಮಂಗಳವಾರ ಅಧಿಕೃತವಾಗಿ ಘೋಷಿಸಲಾಯಿತು. ಆಂಧ್ರಪ್ರದೇಶದಿಂದ ರಾಜ್ಯಸಭಾ ಸದಸ್ಯರಾಗಿದ್ದ ಎನ್‌.­ಜನಾ­ರ್ದನ ರೆಡ್ಡಿ ಅವರು ಮೇ 9ರಂದು ಮೃತಪಟ್ಟ ನಂತರ  ಈ ಸ್ಥಾನ  ಖಾಲಿ ಉಳಿದಿತ್ತು.

ರಾಜ್ಯಸಭೆಗೆ ಜುಲೈ 3 ರಂದು ಚುನಾವಣೆ ನಡೆ­ಯ­ಬೇಕಿತ್ತು. ನಾಮಪತ್ರ ಸಲ್ಲಿಕೆಯ ಕೊನೆಯ  ದಿನ  ಸೋಮ­ವಾರದ ವರೆಗೆ ನಿರ್ಮಲಾ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರು.  ಹೀಗಾಗಿ ನಿರ್ಮಲಾ ಅವರು ಅವಿರೋಧ ಆಯ್ಕೆಯಾಗಿದ್ದಾರೆ ಎಂದು  ಘೋಷಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT