ಬೆಂಗಳೂರು: ಕಂಠೀರವ ಸ್ಟುಡಿಯೊ ಆವರಣದಲ್ಲಿ ನಿರ್ಮಿಸಿರುವ ಕನ್ನಡದ ಮೇರುನಟ ಡಾ.ರಾಜ್ಕುಮಾರ್ ಅವರ ಸ್ಮಾರಕದ ಲೋಕಾರ್ಪಣೆ ಸಮಾರಂಭವನ್ನು ಅವಿಸ್ಮರಣೀಯಗೊಳಿಸುವ ನಿಟ್ಟಿನಲ್ಲಿ ಅದ್ಧೂರಿ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಶನಿವಾರ (ನ.29) ಬೆಳಿಗ್ಗೆ 10.30ರಿಂದ 11.30ರವರೆಗೆ ಈ ಸಮಾರಂಭ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಮಾರಕ ಉದ್ಘಾಟನೆ ಮಾಡಲಿದ್ದಾರೆ. ಮೇರು ನಟರಾದ ರಜನಿಕಾಂತ್, ಚಿರಂಜೀವಿ, ಡಾ.ಬಿ.ಸರೋಜಾದೇವಿ ಸೇರಿದಂತೆ ವಿವಿಧ ಭಾಷೆಗಳ ನಟ–ನಟಿಯರು ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ.