ಬೆಂಗಳೂರು: ‘ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಬಿ.ಆರ್.ಅನಂತನ್ ಅವರು ಕುಲಪತಿಯಾಗಿದ್ದಾಗ ನೇಮಕಾತಿಯಲ್ಲಿ ಅಕ್ರಮ ನಡೆದಿದೆ. ಇದರ ತನಿಖೆಗೆ ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಮಿತಿ ರಚನೆ ಮಾಡಬೇಕು’ ಎಂದು ವಕೀಲ ಬಸವರಾಜ ಗೊಡಚಿ ಒತ್ತಾಯಿಸಿದರು.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘2010 ರಿಂದ 2014ರವರೆಗೆ ಉಪನ್ಯಾಸಕರ, ಪ್ರಥಮ ದರ್ಜೆ ಸಹಾಯಕ ಹಾಗೂ ದ್ವಿತೀಯದರ್ಜೆ ಸಹಾಯಕ ಹುದ್ದೆಗಳ ನೇಮಕದಲ್ಲಿ ಅಕ್ರಮ ನಡೆದಿದೆ. ಈ ಸಂಬಂಧ ರಾಜ್ಯಪಾಲರಿಗೆ ದಾಖಲೆಗಳನ್ನು ನೀಡಲಾಗಿದೆ’ ಎಂದರು.