ಬೆಂಗಳೂರು: ಭಾರತೀಯ ಸಂಗೀತ ಶಾಸ್ತ್ರಕ್ಕೆ ಅಪಾರ ಕೊಡುಗೆ ನೀಡಿರುವ ಮಹಾಮಹೋಪಾಧ್ಯಾಯ ಡಾ. ರಾ. ಸತ್ಯನಾರಾಯಣ ಅವರು ಪ್ರತಿಷ್ಠಿತ ‘ವೀಣೆ ರಾಜಾರಾವ್ ರಾಷ್ಟ್ರೀಯ ಪ್ರಶಸ್ತಿ’ ಗೆ ಆಯ್ಕೆಯಾಗಿದ್ದಾರೆ.
ಕರ್ನಾಟಕ ಸಂಗೀತದ ಪ್ರಸಿದ್ಧ ವಿದ್ವಾಂಸರಾಗಿದ್ದ ಗಾನಕಲಾಭೂಷಣ ವೀಣೆ ರಾಜಾರಾಯರ ಜನ್ಮಶತಮಾ ನೋತ್ಸವದ ಸಂದರ್ಭದಲ್ಲಿ ಸ್ಥಾಪಿಸ ಲಾದ ಈ ಪ್ರಶಸ್ತಿಯನ್ನು ಪ್ರತಿವರ್ಷ ಸಂಗೀತ ಕ್ಷೇತ್ರದ ಒಬ್ಬ ಸಾಧಕರಿಗೆ ನೀಡಿ ಗೌರವಿಸಲಾಗುತ್ತದೆ. ಪ್ರಶಸ್ತಿಯು ₨೨೫ ಸಾವಿರ ನಗದು ಮತ್ತು ರಜತ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.
ಸಂಗೀತಶಾಸ್ತ್ರದಲ್ಲಿ ಅಸಾಧಾರಣ ಪಾಂಡಿತ್ಯ ಪಡೆದಿರುವ ಸತ್ಯನಾ ರಾಯಣ ಅವರು ಬಹುಮುಖ್ಯ ಶಾಸ್ತ್ರ ಗ್ರಂಥಗಳನ್ನು ಕನ್ನಡಕ್ಕೆ ತಂದಿದ್ದಾರೆ. ಪರಂಪರೆ ಮತ್ತು ಪ್ರಯೋಗಶೀಲತೆ ಎರಡೂ ಸೇರಿದ ಅವರ ಸಾಧನೆ ರಾಷ್ಟ್ರಮಟ್ಟದಲ್ಲಿ ಮಾನ್ಯತೆ ಪಡೆದಿದೆ.