ನವದೆಹಲಿ: ರಿಯೋ ಒಲಿಂಪಿಕ್ಸ್ಗೆ ಭಾರತದ ರಾಯಭಾರಿ ಸ್ಥಾನಕ್ಕೆ ಸಲ್ಮಾನ್ ಖಾನ್ ಅವರ ನೇಮಕದ ವಿರುದ್ಧ ವಿರೋಧ ವ್ಯಕ್ತವಾದ ಬೆನ್ನಲ್ಲೇ ‘ಭಾರತೀಯ ಒಲಿಂಪಿಕ್ ಅಸೋಸಿಯೇಷನ್’ (ಐಒಎ) ರಾಯಭಾರಿ ಸ್ಥಾನ ಅಲಂಕರಿಸುವಂತೆ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಮತ್ತು ಸಂಗೀತ ಮಾಂತ್ರಿಕ ಎಆರ್ ರಹಮಾನ್ ಅವರನ್ನು ಕೋರಿದೆ.
ಐಒಎನ ಉಪಾಧ್ಯಕ್ಷ ತರ್ಲೋಚನ್ ಸಿಂಗ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು ರಿಯೋ ಒಲಿಂಪಿಕ್ಸ್ಗೆ ಭಾರತದ ರಾಯಭಾರಿಯಾಗಲು ಸಚಿನ್ ತೆಂಡೂಲ್ಕರ್ ಮತ್ತು ಎ.ಆರ್. ರೆಹಮಾನ್ ಅವರನ್ನು ಸಂಪರ್ಕಿಸಿದ್ದು, ಅವರಿಂದ ಈವರೆಗೆ ಯಾವುದೇ ಉತ್ತರ ಬಂದಿಲ್ಲ ಎಂದು ತಿಳಿಸಿದ್ದಾರೆ.
ಸಲ್ಮಾನ್ ಖಾನ್ ಅವರನ್ನು ರಾಯಭಾರಿಯಾಗಿ ನೇಮಕ ಮಾಡಿದ್ದಕ್ಕೆ ಹಲವಾರು ಕ್ರೀಡಾಪಟುಗಳು ವಿರೋಧ ವ್ಯಕ್ತಪಡಿಸಿದ್ದರು.