<p><strong>ಬೆಂಗಳೂರು: </strong>ರೈತರ ಆತ್ಮಹತ್ಯೆ ವಿಷಯದ ಬಗ್ಗೆ ಚರ್ಚಿಸಲು ಸಂಸತ್ತಿನಲ್ಲಿ ಅವಕಾಶ ಕಲ್ಪಿಸುವಂತೆ ಒತ್ತಾಯಿಸಿ ನವದೆಹಲಿಯ ಜಂತರ್–ಮಂತರ್ನಲ್ಲಿ ಸೋಮವಾರ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಪ್ರಕಟಿಸಿದರು.<br /> <br /> ಚರ್ಚೆಗೆ ಅವಕಾಶ ಸಿಗುವವರೆಗೂ ಸತ್ಯಾಗ್ರಹ ಮುಂದುವರಿಯಲಿದೆ. ಈ ಸತ್ಯಾಗ್ರಹಕ್ಕೆ ಜನತಾ ಪರಿವಾರ ಸೇರಿದಂತೆ ಯಾರಿಂದಲೂ ಬೆಂಬಲ ಕೋರಿಲ್ಲ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.<br /> <br /> ರಾಜ್ಯದಲ್ಲಿ ಒಂದೇ ದಿನ 13 ಜನ ರೈತರು ಆತ್ಮಹತ್ಯೆ ಮಾಡಿಕೊಂಡ ಸುದ್ದಿ ಕೇಳಿದ ನಂತರವೂ ಸುಮ್ಮನೆ ಕುಳಿತಿರಲು ಸಾಧ್ಯವಿಲ್ಲ. ಡಿಜಿಟಲ್ ಇಂಡಿಯಾದಂಥ ಕಾರ್ಯಕ್ರಮಗಳನ್ನು ಘೋಷಿಸಿರುವ ಪ್ರಧಾನಿ ಮೋದಿ, ರೈತರ ಹಿತಾಸಕ್ತಿ ಕಾಯಲು ಯಾವುದೇ ಕಾರ್ಯಕ್ರಮ ಪ್ರಕಟಿಸಿಲ್ಲ ಎಂದು ಆರೋಪಿಸಿದರು.<br /> <br /> ಗುಜರಾತ್ನಲ್ಲಿ ರೈತರು ಆತ್ಮಹತ್ಯೆ ಮಾಡಿಕೊಂಡಾಗಲೂ ಮೋದಿ ಅವರು ತಲೆ ಕೆಡಿಸಿಕೊಂಡಿರಲಿಲ್ಲ. ಮೋದಿ ಅವರನ್ನು ಭೇಟಿಯಾಗಿದ್ದಾಗ, ರೈತರ ಸಮಸ್ಯೆ ಬಗ್ಗೆ ಪ್ರಸ್ತಾಪಿಸಿದ್ದೆ. ಆದರೆ ಅವರು ಪ್ರತಿಕ್ರಿಯಿಸಲಿಲ್ಲ ಎಂದರು.<br /> <br /> ದೇವೇಗೌಡರ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ವ್ಯಕ್ತಪಡಿಸಿ ಜೆಡಿಎಸ್ನ ಸಂಸದರು, ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ನವದೆಹಲಿಗೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರೈತರ ಆತ್ಮಹತ್ಯೆ ವಿಷಯದ ಬಗ್ಗೆ ಚರ್ಚಿಸಲು ಸಂಸತ್ತಿನಲ್ಲಿ ಅವಕಾಶ ಕಲ್ಪಿಸುವಂತೆ ಒತ್ತಾಯಿಸಿ ನವದೆಹಲಿಯ ಜಂತರ್–ಮಂತರ್ನಲ್ಲಿ ಸೋಮವಾರ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಪ್ರಕಟಿಸಿದರು.<br /> <br /> ಚರ್ಚೆಗೆ ಅವಕಾಶ ಸಿಗುವವರೆಗೂ ಸತ್ಯಾಗ್ರಹ ಮುಂದುವರಿಯಲಿದೆ. ಈ ಸತ್ಯಾಗ್ರಹಕ್ಕೆ ಜನತಾ ಪರಿವಾರ ಸೇರಿದಂತೆ ಯಾರಿಂದಲೂ ಬೆಂಬಲ ಕೋರಿಲ್ಲ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.<br /> <br /> ರಾಜ್ಯದಲ್ಲಿ ಒಂದೇ ದಿನ 13 ಜನ ರೈತರು ಆತ್ಮಹತ್ಯೆ ಮಾಡಿಕೊಂಡ ಸುದ್ದಿ ಕೇಳಿದ ನಂತರವೂ ಸುಮ್ಮನೆ ಕುಳಿತಿರಲು ಸಾಧ್ಯವಿಲ್ಲ. ಡಿಜಿಟಲ್ ಇಂಡಿಯಾದಂಥ ಕಾರ್ಯಕ್ರಮಗಳನ್ನು ಘೋಷಿಸಿರುವ ಪ್ರಧಾನಿ ಮೋದಿ, ರೈತರ ಹಿತಾಸಕ್ತಿ ಕಾಯಲು ಯಾವುದೇ ಕಾರ್ಯಕ್ರಮ ಪ್ರಕಟಿಸಿಲ್ಲ ಎಂದು ಆರೋಪಿಸಿದರು.<br /> <br /> ಗುಜರಾತ್ನಲ್ಲಿ ರೈತರು ಆತ್ಮಹತ್ಯೆ ಮಾಡಿಕೊಂಡಾಗಲೂ ಮೋದಿ ಅವರು ತಲೆ ಕೆಡಿಸಿಕೊಂಡಿರಲಿಲ್ಲ. ಮೋದಿ ಅವರನ್ನು ಭೇಟಿಯಾಗಿದ್ದಾಗ, ರೈತರ ಸಮಸ್ಯೆ ಬಗ್ಗೆ ಪ್ರಸ್ತಾಪಿಸಿದ್ದೆ. ಆದರೆ ಅವರು ಪ್ರತಿಕ್ರಿಯಿಸಲಿಲ್ಲ ಎಂದರು.<br /> <br /> ದೇವೇಗೌಡರ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ವ್ಯಕ್ತಪಡಿಸಿ ಜೆಡಿಎಸ್ನ ಸಂಸದರು, ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ನವದೆಹಲಿಗೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>