ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲಿಗೆ ಸಿಲುಕಿ ಬಾಲಕ ಸಾವು

Last Updated 24 ಏಪ್ರಿಲ್ 2014, 20:23 IST
ಅಕ್ಷರ ಗಾತ್ರ

ಬೆಂಗಳೂರು: ಕೆ.ಜಿ.ಹಳ್ಳಿ ಬಳಿಯ ಶ್ಯಾಮ್‌ಪುರ ಗೇಟ್‌ ಸಮೀಪ ಚಲಿಸುತ್ತಿದ್ದ ರೈಲಿಗೆ ಸಿಲುಕಿ 13 ವರ್ಷದ ಅರ್ಬಾಸ್‌ ಖಾನ್‌ ಎಂಬ ಬಾಲಕ ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ.

ಕೆ.ಜಿ.ಹಳ್ಳಿ ನಿವಾಸಿಗಳಾದ ಜಹೀರ್‌ ಖಾನ್‌ ಮತ್ತು ಮುಮ್ತಾಜ್‌ ಬೇಗಂ ಅವರ ಮಗ ಅರ್ಬಾಸ್‌, ಕೆಲ ವರ್ಷಗಳಿಂದ ಶಾಲೆಗೆ ಹೋಗುತ್ತಿರಲಿಲ್ಲ. ಮಧ್ಯಾಹ್ನ 12 ಗಂಟೆ ಸುಮಾರಿಗೆ ಆತ ಸಮೀಪದ ಸಂಬಂಧಿಯೊಬ್ಬರ ಮನೆಗೆ ಹೋಗುತ್ತಿದ್ದ. ರೈಲು ಬರು­ತ್ತಿದ್ದುದನ್ನು ಗಮನಿಸದ ಆತ ಹಳಿ ದಾಟುತ್ತಿದ್ದ ವೇಳೆ ಘಟನೆ ಸಂಭವಿ­ಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೈಯಪ್ಪನಹಳ್ಳಿ ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT