ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೌಡಿಪಟ್ಟಿಗೆ ಆರೋಪಿಗಳು: ಪೊಲೀಸರ ನಿರ್ಧಾರ

Last Updated 27 ಜುಲೈ 2014, 20:04 IST
ಅಕ್ಷರ ಗಾತ್ರ

ಬೆಂಗಳೂರು: ಕಾಲೇಜು ವಿದ್ಯಾರ್ಥಿನಿ­ಯೊಂದಿಗೆ ಅನುಚಿತ­ವಾಗಿ ವರ್ತಿಸಿದ ಆರೋಪದ ಮೇಲೆ ಬಂಧಿಸಿರುವ ಯುವಕರನ್ನು ರೌಡಿಪಟ್ಟಿಗೆ ಸೇರಿ­ಸಲು ಪೊಲೀಸರು ನಿರ್ಧರಿಸಿದ್ದಾರೆ.

‘ಪ್ರಕರಣ ಸಂಬಂಧ ಬಂಧಿಸಲಾ­ಗಿರುವ ರೋಹಿತ್‌ ತಿವಾರಿ (22) ಮತ್ತು ಸಂತೋಷ್‌ಕುಮಾರ್‌ (21) ಎಂಬಾತನನ್ನು ವಿವೇಕನಗರ ಠಾಣೆಯ ರೌಡಿಪಟ್ಟಿಗೆ ಸೇರಿಸಲಾಗು­ತ್ತದೆ. ಒಂದು ವಾರದಲ್ಲಿ ಆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ’ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್‌ ಕಮಿಷನರ್‌ ಅಲೋಕ್‌ಕುಮಾರ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ಯುವತಿಯರನ್ನು ಚುಡಾಯಿ­ಸುವ, ಅವರ ಜತೆ ಅನುಚಿತವಾಗಿ ವರ್ತಿ­ಸುವ ಮತ್ತು ಮಹಿಳೆಯರ ಗೌರವಕ್ಕೆ ಧಕ್ಕೆ ತರುವ ಪ್ರಕರಣ­ಗಳನ್ನು ಗಂಭೀರವಾಗಿ ಪರಿಗಣಿಸ­ಲಾಗಿದೆ. ಅಂತಹ ಕೃತ್ಯ ಎಸಗುವ ಆರೋಪಿಗಳನ್ನು ರೌಡಿಪಟ್ಟಿಗೆ ಸೇರಿ­ಸಲಾಗುತ್ತದೆ ಎಂದು ಹೇಳಿದ್ದಾರೆ.
ರೌಡಿಪಟ್ಟಿಯಲ್ಲಿರುವ ಆರೋಪಿ­ಗಳ ಮೇಲೆ ನಿರಂತರ ಕಣ್ಗಾವಲು ಇಡಲಾಗುತ್ತದೆ. ಅಲ್ಲದೇ, ಅವರನ್ನು ಠಾಣೆಗೆ ಕರೆಸಿ ವಿಚಾರಣೆ ಮಾಡಲಾ­ಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT