ಬೆಂಗಳೂರು: ನಿಗದಿತ ಮಿತಿಗಿಂತ ಹೆಚ್ಚು ಸರಕುಗಳ ಸಾಗಣೆ ತಡೆಯಲು ಆರ್ಟಿಒ ಇನ್ಸ್ಪೆಕ್ಟರ್ಗಳು ಸಹಕಾರ ನೀಡುತ್ತಿಲ್ಲ ಎಂದು ಆರೋಪಿಸಿ ರಾಜ್ಯ ಲಾರಿ ಮಾಲೀಕರ ಸಂಘಗಳ ಒಕ್ಕೂಟದ ಸದಸ್ಯರು ಶೇಷಾದ್ರಿ ರಸ್ತೆಯ ಗಾಂಧಿ ಪ್ರತಿಮೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಬಿ.ಚನ್ನಾರೆಡ್ಡಿ, ‘ಸರಕು ಸಾಗಣೆ ವಾಹನಗಳಲ್ಲಿ ನಿಗದಿತ ಮಿತಿಗಿಂತ ಹೆಚ್ಚು ಸರಕುಗಳನ್ನು ಸಾಗಣೆ ಮಾಡಬಾರದು ಎಂದು ಜುಲೈ 1ರಂದು ಒಕ್ಕೂಟದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಇದಕ್ಕೆ ಆರ್ಟಿಒ ಇನ್ಸ್ಪೆಕ್ಟರ್ಗಳು ಸರಿಯಾದ ಸಹಕಾರ ನೀಡುತ್ತಿಲ್ಲ’ ಎಂದು ದೂರಿದರು.