ನವದೆಹಲಿ (ಪಿಟಿಐ): ಲೋಕಸಭೆ ಚುನಾವಣೆ ಸೋಲಿನ ಹೊಣೆಹೊತ್ತುಕೊಂಡ ಸಿಪಿಎಂ ಪ್ರಮುಖರು, ಸದ್ಯಕ್ಕೆ ನಾಯಕತ್ವ ಬದಲಾವಣೆಯ ಸುಳಿವು ನೀಡಿಲ್ಲ.
‘ಪಾಲಿಟ್ಬ್ಯುರೊ ಹಾಗೂ ಕೇಂದ್ರ ನಾಯಕತ್ವ, ಚುನಾವಣೆಯ ಸೋಲಿನ ಹೊಣೆ ಹೊತ್ತುಕೊಂಡಿದೆ’ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಕಾಶ್್ ಕಾರಟ್್ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಕಮ್ಯುನಿಸ್ಟ್ ಪಕ್ಷದಲ್ಲಿ ಯಾರೂ ಚುನಾವಣೆ ಫಲಿತಾಂಶದ ಕಾರಣಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.
ಚುನಾವಣೆಯಲ್ಲಿ ಪಕ್ಷವು ಸೋಲು ಕಂಡ ಕಾರಣ ಸೀತಾರಾಂ ಯೆಚೂರಿ ಹಾಗೂ ಪಶ್ಚಿಮಬಂಗಾಳದ ಕೆಲವು ಹಿರಿಯ ಮುಖಂಡರು ಪಕ್ಷದ ಪಾಲಿಟ್ಬ್ಯುರೊ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರು ಎಂದು ಈ ಮೊದಲು ವರದಿಯಾಗಿತ್ತು.