ನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಶನಿವಾರ (ಜೂ.13) ನಗರ ಸಿವಿಲ್ ನ್ಯಾಯಾಲಯದ¼ ಸಭಾಂಗಣದಲ್ಲಿ ಲೋಕ ಅದಾಲತ್ ಹಮ್ಮಿಕೊಂಡಿದೆ.
ಈ ಅದಾಲತ್ನಲ್ಲಿ ಮೋಟಾರು ವಾಹನ ಕಾಯ್ದೆ ಹಾಗೂ ವಿಮಾ ಕಂಪೆನಿಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಬೃಹತ್ ಪ್ರಮಾಣದಲ್ಲಿ ತೆಗೆದುಕೊಂಡು ಇತ್ಯರ್ಥ ಪಡಿಸಲಾಗುವುದು ಎಂದು ಪ್ರಾಧಿಕಾರದ ಕಾರ್ಯದರ್ಶಿ ರೋಣ ವಾಸುದೇವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಆಹ್ವಾನ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2015–026ನೇ ಸಾಲಿನ ಐಎಎಸ್, ಕೆಎಎಸ್ ಮತ್ತು ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಪರೀಕ್ಷಾ ಪೂರ್ವ ತಯಾರಿ ತರಬೇತಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಅರ್ಜಿಗಳನ್ನು ಅಭ್ಯರ್ಥಿಗಳು ಜೂನ್್ 30ರ ಒಳಗೆ ಆನ್ಲೈನ್ ಮೂಲಕ ಸಲ್ಲಿಸಬೇಕು. ಮಾಹಿತಿಗಾಗಿ 4455 4444.
ಪದಾಧಿಕಾರಿಗಳ ಆಯ್ಕೆ
ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟದ 2015ರಿಂದ 3 ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಎಂ.ತಿಮ್ಮಯ್ಯ ಆಯ್ಕೆಯಾಗಿದ್ದಾರೆ.ಪದಾಧಿಕಾರಿಗಳಾಗಿ ಸಿದ್ದಯ್ಯ (ಕಾರ್ಯಾಧ್ಯಕ್ಷ), ಎನ್.ಶ್ರೀಧರ, ಎಂ.ಗೌಡಯ್ಯ (ಪ್ರಧಾನ ಕಾರ್ಯದರ್ಶಿ)ಆಯ್ಕೆಯಾಗಿದ್ದಾರೆ.