‘ನಗರದ ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, ಅಲ್ಲಿ ಸಿಲುಕಿರುವ ಜನತೆಗೆ ಅಗತ್ಯ ವಸ್ತುಗಳನ್ನು ಪೂರೈಸಲು ಕಷ್ಟವಾಗುತ್ತಿದೆ. ಆದ್ದರಿಂದ ಅಂತಹ ಪ್ರದೇಶಗಳಲ್ಲಿ ಹೆಲಿಕಾಪ್ಟರ್ಗಳ ಮೂಲಕ ಆಹಾರದ ಪೊಟ್ಟಣಗಳು ಹಾಗೂ ಕುಡಿಯುವ ನೀರಿನ ಬಾಟಲಿಗಳನ್ನು ಒದಗಿಸಲು ನೆರವು ನೀಡುವಂತೆ ಸೇನೆಗೆ ಮನವಿ ಮಾಡಿಕೊಂಡಿದ್ದೇವೆ’ ಎಂದು ವಡೋದರಾ ನಗರಪಾಲಿಕೆ ಆಯುಕ್ತ ಮನಿಷ್ ಭಾರದ್ವಾಜ್ ಅವರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.