<p><strong>ಬೆಂಗಳೂರು:</strong> ರಾಮಕಥಾ ಗಾಯಕಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಶ್ರೀಗಳ ವಿರುದ್ಧದ ಮೇಲ್ಮನವಿ ವಿಚಾರಣೆಯಿಂದ ನ್ಯಾಯಮೂರ್ತಿ ರಾಮಮೋಹನ ರೆಡ್ಡಿ ಅವರು ಹಿಂದೆ ಸರಿದಿದ್ದಾರೆ.<br /> <br /> ತಮ್ಮ ವಿರುದ್ಧ ದಾಖಲಿಸಲಾಗಿರುವ ಅತ್ಯಾಚಾರ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಶ್ರೀಗಳು ಸಲ್ಲಿಸಿದ್ದ ರಿಟ್ ಅರ್ಜಿ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಡಿ.ಎಚ್.ವಘೇಲಾ, ನ್ಯಾಯಮೂರ್ತಿ ರಾಮಮೋಹನ ರೆಡ್ಡಿ ಅವರಿದ್ದ ವಿಭಾಗೀಯ ಪೀಠವು ಮಂಗಳವಾರ ವಿಚಾರಣೆ ನಡೆಸಿತು.<br /> <br /> ಬೆಳಗಿನ ಕಲಾಪದಲ್ಲಿ ಕಕ್ಷಿದಾರ ಶ್ರೀಗಳ ಪರ ವಾದಿಸಿದ ಹಿರಿಯ ವಕೀಲ ಬಿ.ವಿ. ಆಚಾರ್ಯ ಅವರು, ‘ನನ್ನ ಕಕ್ಷಿದಾರರು ಅತ್ಯಾಚಾರ ಎಸಗಿಲ್ಲ. ಇದೆಲ್ಲಾ ಸುಳ್ಳು ಆರೋಪ’ ಎಂದು ಪ್ರತಿಪಾದಿಸಿದರು.<br /> <br /> ಈ ವೇಳೆ, ‘ಸಿಐಡಿ ತನಿಖೆ ಯಾವ ಹಂತದಲ್ಲಿದೆ? ಚಾರ್ಜ್ಶೀಟ್ ಸಲ್ಲಿಸಲಾಗಿದೆಯೇ? ಸಾಕ್ಷಿಗಳ ವಿಚಾರಣೆ ನಡೆಸಿದ್ದೀರಾ...’ ಎಂಬ ಮುಖ್ಯ ನ್ಯಾಯಮೂರ್ತಿಗಳ ಪ್ರಶ್ನೆಗೆ, ಪ್ರಾಸಿಕ್ಯೂಷನ್ ಪರ ಹಾಜರಾಗಿದ್ದ ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್ ಉತ್ತರಿಸಿ, ‘ಬಾಕಿ ಉಳಿದಿರುವ ವೈದ್ಯಕೀಯ ಪರೀಕ್ಷೆಗೆ ತನಿಖಾಧಿಕಾರಿಗಳ ಜೊತೆ ಸ್ವಾಮೀಜಿ ಸಹಕರಿಸುತ್ತಿಲ್ಲ’ ಎಂದರು.<br /> <br /> ‘ಈ ಕಾರಣಕ್ಕಾಗಿಯೇ ಸ್ವಾಮೀಜಿಯವರ ನಿರೀಕ್ಷಣಾ ಜಾಮೀನು ರದ್ದುಗೊಳಿಸುವಂತೆ ಕೋರಿ ಮನವಿ ಸಲ್ಲಿಸಲಾಗುವುದು’ ಎಂದೂ ಅವರು ನ್ಯಾಯಪೀಠಕ್ಕೆ ವಿವರಿಸಿದರು.<br /> <br /> ವಾದ ಪ್ರತಿವಾದ ಆಲಿಸಿದ ಪೀಠವು, ‘ತನಿಖೆ ಎಲ್ಲ ವಿವರಗಳನ್ನು ಒಪ್ಪಿಸಿ’ ಎಂದು ಸೂಚಿಸಿ ಕಲಾಪವನ್ನು ಮಧ್ಯಾಹಕ್ಕೆ ಮುಂದೂಡಿತು. ಆದರೆ ಮಧ್ಯಾಹ್ನ ಪ್ರಕರಣ ವಿಚಾರಣೆಗೆ ಬರುತ್ತಿದ್ದಂತೆಯೇ ನ್ಯಾಯಮೂರ್ತಿ ರಾಮಮೋಹನ ರೆಡ್ಡಿ ಅವರು ವಿಚಾರಣೆಯಿಂದ ಹಿಂದೆ ಸರಿಯುತ್ತಿರುವುದಾಗಿ ಪ್ರಕಟಿಸಿದರು.<br /> <br /> ಈ ಪ್ರಕರಣದ ಸಂಬಂಧ ಏಕಸದಸ್ಯ ಪೀಠದ ನ್ಯಾ. ಕೆ.ಎನ್.ಫಣೀಂದ್ರ ಅವರೂ ವಿಚಾರಣೆಯಿಂದ ಹಿಂದೆ ಸರಿದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಮಕಥಾ ಗಾಯಕಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಶ್ರೀಗಳ ವಿರುದ್ಧದ ಮೇಲ್ಮನವಿ ವಿಚಾರಣೆಯಿಂದ ನ್ಯಾಯಮೂರ್ತಿ ರಾಮಮೋಹನ ರೆಡ್ಡಿ ಅವರು ಹಿಂದೆ ಸರಿದಿದ್ದಾರೆ.<br /> <br /> ತಮ್ಮ ವಿರುದ್ಧ ದಾಖಲಿಸಲಾಗಿರುವ ಅತ್ಯಾಚಾರ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಶ್ರೀಗಳು ಸಲ್ಲಿಸಿದ್ದ ರಿಟ್ ಅರ್ಜಿ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಡಿ.ಎಚ್.ವಘೇಲಾ, ನ್ಯಾಯಮೂರ್ತಿ ರಾಮಮೋಹನ ರೆಡ್ಡಿ ಅವರಿದ್ದ ವಿಭಾಗೀಯ ಪೀಠವು ಮಂಗಳವಾರ ವಿಚಾರಣೆ ನಡೆಸಿತು.<br /> <br /> ಬೆಳಗಿನ ಕಲಾಪದಲ್ಲಿ ಕಕ್ಷಿದಾರ ಶ್ರೀಗಳ ಪರ ವಾದಿಸಿದ ಹಿರಿಯ ವಕೀಲ ಬಿ.ವಿ. ಆಚಾರ್ಯ ಅವರು, ‘ನನ್ನ ಕಕ್ಷಿದಾರರು ಅತ್ಯಾಚಾರ ಎಸಗಿಲ್ಲ. ಇದೆಲ್ಲಾ ಸುಳ್ಳು ಆರೋಪ’ ಎಂದು ಪ್ರತಿಪಾದಿಸಿದರು.<br /> <br /> ಈ ವೇಳೆ, ‘ಸಿಐಡಿ ತನಿಖೆ ಯಾವ ಹಂತದಲ್ಲಿದೆ? ಚಾರ್ಜ್ಶೀಟ್ ಸಲ್ಲಿಸಲಾಗಿದೆಯೇ? ಸಾಕ್ಷಿಗಳ ವಿಚಾರಣೆ ನಡೆಸಿದ್ದೀರಾ...’ ಎಂಬ ಮುಖ್ಯ ನ್ಯಾಯಮೂರ್ತಿಗಳ ಪ್ರಶ್ನೆಗೆ, ಪ್ರಾಸಿಕ್ಯೂಷನ್ ಪರ ಹಾಜರಾಗಿದ್ದ ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್ ಉತ್ತರಿಸಿ, ‘ಬಾಕಿ ಉಳಿದಿರುವ ವೈದ್ಯಕೀಯ ಪರೀಕ್ಷೆಗೆ ತನಿಖಾಧಿಕಾರಿಗಳ ಜೊತೆ ಸ್ವಾಮೀಜಿ ಸಹಕರಿಸುತ್ತಿಲ್ಲ’ ಎಂದರು.<br /> <br /> ‘ಈ ಕಾರಣಕ್ಕಾಗಿಯೇ ಸ್ವಾಮೀಜಿಯವರ ನಿರೀಕ್ಷಣಾ ಜಾಮೀನು ರದ್ದುಗೊಳಿಸುವಂತೆ ಕೋರಿ ಮನವಿ ಸಲ್ಲಿಸಲಾಗುವುದು’ ಎಂದೂ ಅವರು ನ್ಯಾಯಪೀಠಕ್ಕೆ ವಿವರಿಸಿದರು.<br /> <br /> ವಾದ ಪ್ರತಿವಾದ ಆಲಿಸಿದ ಪೀಠವು, ‘ತನಿಖೆ ಎಲ್ಲ ವಿವರಗಳನ್ನು ಒಪ್ಪಿಸಿ’ ಎಂದು ಸೂಚಿಸಿ ಕಲಾಪವನ್ನು ಮಧ್ಯಾಹಕ್ಕೆ ಮುಂದೂಡಿತು. ಆದರೆ ಮಧ್ಯಾಹ್ನ ಪ್ರಕರಣ ವಿಚಾರಣೆಗೆ ಬರುತ್ತಿದ್ದಂತೆಯೇ ನ್ಯಾಯಮೂರ್ತಿ ರಾಮಮೋಹನ ರೆಡ್ಡಿ ಅವರು ವಿಚಾರಣೆಯಿಂದ ಹಿಂದೆ ಸರಿಯುತ್ತಿರುವುದಾಗಿ ಪ್ರಕಟಿಸಿದರು.<br /> <br /> ಈ ಪ್ರಕರಣದ ಸಂಬಂಧ ಏಕಸದಸ್ಯ ಪೀಠದ ನ್ಯಾ. ಕೆ.ಎನ್.ಫಣೀಂದ್ರ ಅವರೂ ವಿಚಾರಣೆಯಿಂದ ಹಿಂದೆ ಸರಿದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>