ಜಮ್ಮು (ಪಿಟಿಐ): 1971ರಲ್ಲಿ ಪಾಕಿಸ್ತಾನದ ವಿರುದ್ಧ ನಡೆದ ಯುದ್ಧದಲ್ಲಿ ಸಾಧಿಸಿದ ಐತಿಹಾಸಿಕ ವಿಜಯದ ಅಂಗವಾಗಿ ಮಂಗಳವಾರ ಉದಂಪುರದಲ್ಲಿರುವ ಸೇನೆಯ ಕಚೇರಿಯಲ್ಲಿ 43ನೇ ‘ವಿಜಯ ದಿವಸ’ ವರ್ಷಾಚರಣೆ ಕಾರ್ಯಕ್ರಮ ನಡೆಯಿತು.
ಯುದ್ಧದಲ್ಲಿ ವೀರ ಮರಣ ಹೊಂದಿದ ಯೋಧರಿಗೆ ಇದೇ ಸಂದರ್ಭದಲ್ಲಿ ಶೃದ್ಧಾಂಜಲಿ ಸಲ್ಲಿಸಲಾಯಿತು. ಈ ಯುದ್ಧ ಬಾಂಗ್ಲಾ ದೇಶ ಉದಯಕ್ಕೆ ಕಾರಣವಾಯಿತು.
ಸೇನೆಯ ಅಧಿಕಾರಿಗಳು ಸೇರಿದಂತೆ ಗಣ್ಯರು, ನಾಗರಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.