ಬೆಂಗಳೂರು: ಬಿದರಹಳ್ಳಿ ಬಳಿಯ ಈಸ್ಟ್ ಪಾಯಿಂಟ್ ಸಮೂಹ ಸಂಸ್ಥೆಗಳ ವತಿಯಿಂದ ಬಿದರಹಳ್ಳಿ ಮತ್ತು ಆವಲಹಳ್ಳಿ ಗ್ರಾಮ ಪಂಚಾಯ್ತಿಯ ಹಳ್ಳಿಗಳಲ್ಲಿ ಶುಕ್ರವಾರ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಒಂದು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಗ್ರಾಮಗಳ ಬೀದಿಗಳನ್ನು ಶುಚಿಗೊಳಿಸಿದರು. ಈಸ್ಟ್ ಪಾಯಿಂಟ್ ಆಸ್ಪತ್ರೆ ಬಳಿಯಿಂದ ಆರಂಭವಾದ ಸ್ವಚ್ಛತಾ ಕಾರ್ಯಕ್ಕೆ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ.ಎಸ್.ಎಂ.ವೆಂಕಟಪತಿ ಚಾಲನೆ ನೀಡಿದರು.
ನಂತರ ವಿದ್ಯಾರ್ಥಿಗಳು ರಸ್ತೆ ಬದಿಯ ಗಿಡ ಗಂಟೆಗಳು, ರಾಜಕಾಲುವೆ ಗಳ ಇಕ್ಕೆಲಗಳ ತ್ಯಾಜ್ಯ, ಖಾಲಿ ಜಾಗಗಳಲ್ಲಿ ಸುರಿಯಲಾಗಿದ್ದ ಕಸವನ್ನು ತೆರವುಗೊಳಿಸಿದರು. ಶಿಕ್ಷಣ ಸಂಸ್ಥೆಗಳ ಬೋಧಕ ಹಾಗೂ ಬೋಧಕೇತರ ನೌಕರರೂ ಪಾಲ್ಗೊಂಡಿದ್ದರು.