ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್ಟಿಸಿ) ಪ್ರಧಾನ ಕಚೇರಿಯಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು.
ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಶೇ 70ಕ್ಕಿಂತ ಅಧಿಕ ಅಂಕ ಹಾಗೂ ಪದವಿಯಲ್ಲಿ ಶೇ 60ಕ್ಕಿಂತ ಅಧಿಕ ಅಂಕ ಗಳಿಸಿದ ನಿಗಮದ ಅಧಿಕಾರಿಗಳ ಹಾಗೂ ನೌಕರರ 1,060 ಮಕ್ಕಳಿಗೆ ತಲಾ ₨4 ಸಾವಿರದಂತೆ ಒಟ್ಟು ₨26 ಲಕ್ಷ ನಗದು ಪುರಸ್ಕಾರ ನೀಡಲಾಯಿತು.
ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಕುಮಾರ್ ಕಟಾರಿಯಾ ಅವರು 30 ವಿದ್ಯಾರ್ಥಿಗಳಿಗೆ ಪುರಸ್ಕಾರ ಪ್ರದಾನ ಮಾಡಿದರು.