ಬೆಂಗಳೂರು: ಸುಬ್ರಹ್ಮಣ್ಯನಗರ ಸಮೀಪದ ಕೇತಮಾರನಹಳ್ಳಿಯಲ್ಲಿ ಶನಿವಾರ ರಾತ್ರಿ ಒಂಬತ್ತನೇ ತರಗತಿ ವಿದ್ಯಾರ್ಥಿ ಚೇತನ್ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೆಕ್ಯಾನಿಕ್ ಗೋವಿಂದರಾಜು ಅವರ ಮಗನಾದ ಚೇತನ್, ಸಂಜೆ ಮನೆಯಲ್ಲೇ ನೇಣು ಹಾಕಿಕೊಂಡಿದ್ದಾನೆ. ದೇವಸ್ಥಾನಕ್ಕೆ ಹೋಗಿದ್ದ ಪೋಷಕರು, ರಾತ್ರಿ 9 ಗಂಟೆಗೆ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.
ಬಾಗಿಲು ಮುರಿದು ಕೋಣೆ ಪ್ರವೇಶಿಸಿದ ಗೋವಿಂದರಾಜು, ಕೂಡಲೇ ಮಗನನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು. ಈ ವೇಳೆಗಾಗಲೇ ಚೇತನ್ ಕೊನೆಯುಸಿರೆಳೆದಿದ್ದ. ಆತ್ಮಹತ್ಯೆಗೆ ನಿಖರ ಕಾರಣ ಗೊತ್ತಾಗಿಲ್ಲ.