ನವದೆಹಲಿ (ಪಿಟಿಐ): ಬಿಜೆಪಿಯ ಲೇವಡಿಯ ಹೊರತಾಗಿಯೂ ಲೋಕಸಭೆಯ ವಿರೋಧ ಪಕ್ಷದ ಸ್ಥಾನಕ್ಕೆ ಕಾಂಗ್ರೆಸ್ ಸೋಮವಾರ ಬೇಡಿಕೆ ಸಲ್ಲಿಸಿದೆ.
ಲೋಕಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಕಾಂಗ್ರೆಸ್ ಪಕ್ಷಕ್ಕೆ ವಿರೋಧ ಪಕ್ಷದ ಸ್ಥಾನ ನೀಡುವಂತೆ ಪಕ್ಷದ ವಕ್ತಾರ ಆನಂದ್ ಶರ್ಮಾ ಒತ್ತಾಯಿಸಿದ್ದಾರೆ. ಆದಷ್ಟೂ ಬೇಗ ಈ ಕುರಿತು ತೀರ್ಮಾನ ತೆಗೆದುಕೊಳ್ಳುವಂತೆ ಅವರು ಆಗ್ರಹಿಸಿದ್ದಾರೆ.
‘ಯಾವ ರಾಜಕೀಯ ಪಕ್ಷಕ್ಕೂ ವಿರೋಧ ಪಕ್ಷವಾಗುವ ಜನಾದೇಶ ದೊರೆತಿಲ್ಲ’ ಎಂದು ಸಂಸದೀಯ ವ್ಯವಹಾರಗಳ ಸಚಿವ ಎಂ.ವೆಂಕಯ್ಯ ನಾಯ್ಡು, ಕಾಂಗ್ರೆಸ್ ಬೇಡಿಕೆಯನ್ನು ಲೇವಡಿ ಮಾಡಿದ್ದಾರೆ.
‘ಜನರ ಭಾವನೆಗಳನ್ನು ಕಾಂಗ್ರೆಸ್ ಯಾಕೆ ಅರ್ಥ ಮಾಡಿಕೊಳ್ಳುತ್ತಿಲ್ಲ’ ಎಂದು ಅವರು ಪ್ರಶ್ನಿಸಿದ್ದಾರೆ.