<p><strong>ಮುಂಬೈ (ಪಿಟಿಐ):</strong> ಮಹಾರಾಷ್ಟ್ರ ವಿಧಾನಸಭೆ ಮೂರು ದಿನಗಳ ಅಧಿವೇಶನ ಸೋಮವಾರ ಆರಂಭಗೊಂಡಿದ್ದು, ಶಿವಸೇನಾ ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತಿದೆ. ಈ ಮೂಲಕ ಬಿಜೆಪಿ–ಶಿವಸೇನೆ ನಡುವಣ ಶೀತಲ ಸಮರ ಬಹಿರಂಗ ವೇದಿಕೆ ಅಲಂಕರಿಸಿದೆ.</p>.<p>ಬಹುಮತ ಸಾಬೀತು ಪಡಿಸಲು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು, ಈ ಅಧಿವೇಶನದಲ್ಲಿ ವಿಶ್ವಾಸ ಮತ ಯಾಚಿಸಲಿದ್ದಾರೆ.</p>.<p>ಕೇಸರಿ ಪಟಕಾ ಧರಿಸಿ ವಿಧಾನಸಭೆಗೆ ಬಂದ ಶಿವಸೇನಾ ಶಾಸಕರು, ವಿರೋಧ ಪಕ್ಷದ ಸ್ಥಾನಗಳಲ್ಲಿ ಆಸೀನರಾದರು. 288 ಸದಸ್ಯ ಬಲದ ವಿಧಾನಸಭೆಯಲ್ಲಿ ಶಿವಸೇನಾ ಎರಡನೇ ಬಹುದೊಡ್ಡ ಪಕ್ಷವಾಗಿರುವುದರಿಂದ ನಿಯಮದಂತೆ ಅವರಿಗೆ ಅಲ್ಲಿಯೇ ಆಸನಗಳನ್ನು ನಿಗದಿಪಡಿಸಲಾಗಿತ್ತು.</p>.<p>ಸೋಮವಾರ ಬೆಳಿಗ್ಗೆ 11ಗಂಟೆಗೆ ವಿಧಾನಸಭೆಯ ಕಲಾಪ ಆರಂಭಗೊಳ್ಳುವ ಮೊದಲು ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಹಿರಿಯ ಶಾಸಕ ಜೀವ ಪಾಂಡು ಗವಿತ್ ಅವರು ಹಂಗಾಮಿ ಸ್ಪೀಕರ್ ಆಗಿ ಪ್ರಮಾಣ ಸ್ವೀಕರಿಸಿದರು. ರಾಜ್ಯಪಾಲರಾದ ವಿದ್ಯಾಸಾಗರ್ ರಾವ್ ಅವರು ಗವಿತ್ ಅವರಿಗೆ ಅಧಿಕಾರ ಗೌಪ್ಯತೆ ಬೋಧಿಸಿದರು.</p>.<p>ಬಳಿಕ ಗವಿತ್ ಅವರು ಹೊಸದಾಗಿ ಆಯ್ಕೆಯಾಗಿರುವ ಸದಸ್ಯರಿಗೆ ಪ್ರಮಾಣವಚನ ಬೋಧಿಸಿದರು. ನಾಳೆಯವರೆಗೂ ಪ್ರಮಾಣ ವಚನ ಬೋಧಿಸುವ ಕಾರ್ಯ ನಡೆಯಲಿದ್ದು, ಅಧಿವೇಶನದ ಕೊನೆಯ ದಿನ ನವೆಂಬರ್ 12ರಂದು ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.</p>.<p>ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಪಕ್ಷವೂ ಅಭ್ಯರ್ಥಿಯನ್ನು ನಿಲ್ಲಿಸುವ ಸಾಧ್ಯತೆಗಳಿವೆ ಎಂದು ಶಿವಸೇನೆ ಮೂಲಗಳು ಹೇಳಿವೆ.</p>.<p>ಶಾಸಕರಾಗಿ ಪ್ರಮಾಣ ಸ್ವೀಕರಿಸುವ ಮೊದಲು ಕೆಲವರು ದೇವರನ್ನು ಪ್ರಾರ್ಥಿಸಿದರೆ ಇನ್ನು ಕೆಲವರು ‘ಜೈ ವಿದರ್ಭ’ ಎಂದರು. ಮತ್ತೆ ಕೆಲವರು ‘ನಮೋ’ ಜಪ ಮಾಡಿದರು!</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ (ಪಿಟಿಐ):</strong> ಮಹಾರಾಷ್ಟ್ರ ವಿಧಾನಸಭೆ ಮೂರು ದಿನಗಳ ಅಧಿವೇಶನ ಸೋಮವಾರ ಆರಂಭಗೊಂಡಿದ್ದು, ಶಿವಸೇನಾ ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತಿದೆ. ಈ ಮೂಲಕ ಬಿಜೆಪಿ–ಶಿವಸೇನೆ ನಡುವಣ ಶೀತಲ ಸಮರ ಬಹಿರಂಗ ವೇದಿಕೆ ಅಲಂಕರಿಸಿದೆ.</p>.<p>ಬಹುಮತ ಸಾಬೀತು ಪಡಿಸಲು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು, ಈ ಅಧಿವೇಶನದಲ್ಲಿ ವಿಶ್ವಾಸ ಮತ ಯಾಚಿಸಲಿದ್ದಾರೆ.</p>.<p>ಕೇಸರಿ ಪಟಕಾ ಧರಿಸಿ ವಿಧಾನಸಭೆಗೆ ಬಂದ ಶಿವಸೇನಾ ಶಾಸಕರು, ವಿರೋಧ ಪಕ್ಷದ ಸ್ಥಾನಗಳಲ್ಲಿ ಆಸೀನರಾದರು. 288 ಸದಸ್ಯ ಬಲದ ವಿಧಾನಸಭೆಯಲ್ಲಿ ಶಿವಸೇನಾ ಎರಡನೇ ಬಹುದೊಡ್ಡ ಪಕ್ಷವಾಗಿರುವುದರಿಂದ ನಿಯಮದಂತೆ ಅವರಿಗೆ ಅಲ್ಲಿಯೇ ಆಸನಗಳನ್ನು ನಿಗದಿಪಡಿಸಲಾಗಿತ್ತು.</p>.<p>ಸೋಮವಾರ ಬೆಳಿಗ್ಗೆ 11ಗಂಟೆಗೆ ವಿಧಾನಸಭೆಯ ಕಲಾಪ ಆರಂಭಗೊಳ್ಳುವ ಮೊದಲು ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಹಿರಿಯ ಶಾಸಕ ಜೀವ ಪಾಂಡು ಗವಿತ್ ಅವರು ಹಂಗಾಮಿ ಸ್ಪೀಕರ್ ಆಗಿ ಪ್ರಮಾಣ ಸ್ವೀಕರಿಸಿದರು. ರಾಜ್ಯಪಾಲರಾದ ವಿದ್ಯಾಸಾಗರ್ ರಾವ್ ಅವರು ಗವಿತ್ ಅವರಿಗೆ ಅಧಿಕಾರ ಗೌಪ್ಯತೆ ಬೋಧಿಸಿದರು.</p>.<p>ಬಳಿಕ ಗವಿತ್ ಅವರು ಹೊಸದಾಗಿ ಆಯ್ಕೆಯಾಗಿರುವ ಸದಸ್ಯರಿಗೆ ಪ್ರಮಾಣವಚನ ಬೋಧಿಸಿದರು. ನಾಳೆಯವರೆಗೂ ಪ್ರಮಾಣ ವಚನ ಬೋಧಿಸುವ ಕಾರ್ಯ ನಡೆಯಲಿದ್ದು, ಅಧಿವೇಶನದ ಕೊನೆಯ ದಿನ ನವೆಂಬರ್ 12ರಂದು ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.</p>.<p>ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಪಕ್ಷವೂ ಅಭ್ಯರ್ಥಿಯನ್ನು ನಿಲ್ಲಿಸುವ ಸಾಧ್ಯತೆಗಳಿವೆ ಎಂದು ಶಿವಸೇನೆ ಮೂಲಗಳು ಹೇಳಿವೆ.</p>.<p>ಶಾಸಕರಾಗಿ ಪ್ರಮಾಣ ಸ್ವೀಕರಿಸುವ ಮೊದಲು ಕೆಲವರು ದೇವರನ್ನು ಪ್ರಾರ್ಥಿಸಿದರೆ ಇನ್ನು ಕೆಲವರು ‘ಜೈ ವಿದರ್ಭ’ ಎಂದರು. ಮತ್ತೆ ಕೆಲವರು ‘ನಮೋ’ ಜಪ ಮಾಡಿದರು!</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>