ನವದೆಹಲಿ (ಪಿಟಿಐ): ಅಕ್ರಮ ಮರಳು ಗಣಿಗಾರಿಕೆ ಮತ್ತು ಕಳೆದ ಮೂರು ವರ್ಷಗಳಲ್ಲಿ ಈ ಅಕ್ರಮಗಳನ್ನು ತಡೆಯಲು ತೆಗೆದುಕೊಳ್ಳಲಾದ ಕ್ರಮಗಳ ವಿವರಗಳನ್ನು ನೀಡುವಂತೆ ಕೇಂದ್ರ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ.
ಮರಳು ಗಣಿಗಾರಿಕೆಯು ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ ಬರುತ್ತದೆಯಾದರೂ ಅಕ್ರಮ ಗಣಿಗಾರಿಕೆಯಿಂದ ಭಾರಿ ಪ್ರಮಾಣದಲ್ಲಿ ಪರಿಸರಕ್ಕೆ ಹಾನಿಯಾಗುತ್ತಿರುವುದರಿಂದ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ರಾಜ್ಯ ಸರ್ಕಾರಗಳಿಗೆ ನೆರವು ನೀಡುವುದು ಕೇಂದ್ರ ಉದ್ದೇಶವಾಗಿದೆ.