ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಬುಧವಾರ ಸಂಜೆ ಭಾರಿ ಮಳೆಯಾಗಿದ್ದು ಬಿಸಿಲಿನ ಝಳದಿಂದ ಬಳವಳಿದಿದ್ದ ಜನತೆಗೆ ತಂಪನೆರೆಯಿತು.
ಸಿಡಿಲು ಬಡಿದು ಗದಗ ಜಿಲ್ಲೆ ಮುಂಡರಗಿ ತಾಲ್ಲೂಕಿನಲ್ಲಿ ರಾಮೇನಹಳ್ಳಿ ನಿವಾಸಿ ಮಂಜಪ್ಪ ರಾಮಪ್ಪ ಬಾಗಲಿ (17) ಮೃತಪಟ್ಟಿದ್ದಾರೆ. ಬಾಗಲಕೋಟೆ, ಬಳ್ಳಾರಿ, ಧಾರವಾಡ, ವಿಜಯಪುರ, ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗಿದೆ. ವಿಜಯಪುರ ಜಿಲ್ಲೆಯ ಆಲಮೇಲ ಸಮೀಪದ ದೇವಣಗಾಂವ ಗ್ರಾಮದಲ್ಲಿ ಸಿಡಿಲು ಬಡಿದು ಎಮ್ಮೆ, ಎತ್ತು ಮೃತಪಟ್ಟಿವೆ.
ವಿಜಯಪುರ ಜಿಲ್ಲೆಯ ಕೊಲ್ಹಾರ, ಗದಗ ಜಿಲ್ಲೆಯ ಮುಳಗುಂದ, ನರಗುಂದ, ಬಾಗಲಕೋಟೆ ಜಿಲ್ಲೆಯ ಬಾದಾಮಿ, ಹುನಗುಂದ, ಬಾಗಲಕೋಟೆ ತಾಲ್ಲೂಕುಗಳಲ್ಲಿ ಮಳೆಯಾಗಿದೆ.